ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ

ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್ ಸುತ್ತಿನಲ್ಲಿ ಪಿವಿ ಸಿಂಧು 21-15, 21-13 ಅಂತರದಲ್ಲಿ ಕೆನಡಾ ಸ್ಪರ್ಧಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟ 2022ರಲ್ಲಿ ಭಾರತ ಗೆದ್ದ 19ನೇ ಚಿನ್ನದ ಪದಕವಾಗಿದೆ.  2014ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೈಕೆಲ್ ಲೀ ಸದ್ಯ 13ನೇ ಶ್ರೇಯಾಂಕಿತರಾಗಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಮುಗ್ಗರಿಸಿದ್ದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್ ಕೂಟದಲ್ಲಿ ಸಿಂಧೂ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ಸಿಂಧೂ ಚಿನ್ನದ ಪದಕದ ಮೂಲಕ ಭಾರತ ಪಜಕ ಪಟ್ಟಿಯಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 19 ಚಿನ್ನ, 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 56 ಪದಕ ಗೆದ್ದುಕೊಂಡಿದೆ.

ಮೊದಲ ಸೆಟ್‌ನಲ್ಲಿ ಪಿವಿ ಸಿಂಧೂ ಪರಾಕ್ರಮ ತೋರಿದರು.  21-15 ಅಂತರದಲ್ಲಿ ಮೊದಲ ಸೆಟ್ ಗೆದ್ದುಕೊಂಡರು. ಎರಡನೇ ಸೆಟ್‌ನಲ್ಲಿ ಗೇಮ್‌ಬ್ರೇಕ್‌ನಲ್ಲಿ 11-6 ಅಂತರದಲ್ಲಿ ಮುನ್ನಡೆ ಪಡೆದ ಸಿಂಧೂ 21-13 ಅಂತರದಲ್ಲಿ ಪಂದ್ಯ ಫಿನೀಶ್ ಮಾಡಿದರು.

ಕ್ವಾರ್ಟರ್‌ ಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಸಿಂಧು, ಮಲೇಷ್ಯಾದ ಜಿನ್‌ ವೀ ಗೋ ವಿರುದ್ಧ 19-21, 21-14, 21-18 ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಮೂಲಕ ಅಂತಿಮ 4ರ ಘಟ್ಟಪ್ರವೇಶಿಸಿದರು.  ಭಾನುವಾರ ಮಹಿಳಾ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ಸಿಂಗಾಪೂರದ ಯೋ ಜಿಯಾ ಮಿನ್‌ ಅವರನ್ನು 21-19, 21-17 ನೇರ ಗೇಮ್‌ಗಳಿಂದ ಮಣಿಸಿದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರು.

ಸಿಂಧು ಚಿನ್ನ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಿವಿ ಸಿಂಧೂ ಚಾಂಪಿಯನ್‌ಗಳ ಚಾಂಪಿಯನ್.  ಎಕ್ಸಲೆಂಟ್ ಅನ್ನೋದನ್ನು ಸಿಂಧೂ ಪದೆ ಪದೇ ಸಾಬೀತುಪಡಿಸಿದ್ದಾಳೆ. ಸಿಂಧೂ ಸಮರ್ಪಣೆ ಮತ್ತು ಬದ್ಧತೆ ವಿಸ್ಮಯಕಾರಿಯಾಗಿದೆ. ಚಿನ್ನ ಗೆದ್ದ ಸಿಂಧೂಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

andolana

Recent Posts

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

10 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

54 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago