ಬರ್ಮಿಂಗ್ಹ್ಯಾಮ್ : ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್ ಸುತ್ತಿನಲ್ಲಿ ಪಿವಿ ಸಿಂಧು 21-15, 21-13 ಅಂತರದಲ್ಲಿ ಕೆನಡಾ ಸ್ಪರ್ಧಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟ 2022ರಲ್ಲಿ ಭಾರತ ಗೆದ್ದ 19ನೇ ಚಿನ್ನದ ಪದಕವಾಗಿದೆ. 2014ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೈಕೆಲ್ ಲೀ ಸದ್ಯ 13ನೇ ಶ್ರೇಯಾಂಕಿತರಾಗಿದ್ದಾರೆ. 2018ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಮುಗ್ಗರಿಸಿದ್ದರು. ಇದೀಗ ಕಾಮನ್ವೆಲ್ತ್ ಗೇಮ್ಸ್ ಕೂಟದಲ್ಲಿ ಸಿಂಧೂ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ಸಿಂಧೂ ಚಿನ್ನದ ಪದಕದ ಮೂಲಕ ಭಾರತ ಪಜಕ ಪಟ್ಟಿಯಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 19 ಚಿನ್ನ, 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 56 ಪದಕ ಗೆದ್ದುಕೊಂಡಿದೆ.
ಮೊದಲ ಸೆಟ್ನಲ್ಲಿ ಪಿವಿ ಸಿಂಧೂ ಪರಾಕ್ರಮ ತೋರಿದರು. 21-15 ಅಂತರದಲ್ಲಿ ಮೊದಲ ಸೆಟ್ ಗೆದ್ದುಕೊಂಡರು. ಎರಡನೇ ಸೆಟ್ನಲ್ಲಿ ಗೇಮ್ಬ್ರೇಕ್ನಲ್ಲಿ 11-6 ಅಂತರದಲ್ಲಿ ಮುನ್ನಡೆ ಪಡೆದ ಸಿಂಧೂ 21-13 ಅಂತರದಲ್ಲಿ ಪಂದ್ಯ ಫಿನೀಶ್ ಮಾಡಿದರು.
ಕ್ವಾರ್ಟರ್ ಫೈನಲ್ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಸಿಂಧು, ಮಲೇಷ್ಯಾದ ಜಿನ್ ವೀ ಗೋ ವಿರುದ್ಧ 19-21, 21-14, 21-18 ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಮೂಲಕ ಅಂತಿಮ 4ರ ಘಟ್ಟಪ್ರವೇಶಿಸಿದರು. ಭಾನುವಾರ ಮಹಿಳಾ ಸಿಂಗಲ್ಸ್ ಸೆಮಿಫೈನಲ್ನಲ್ಲಿ ಸಿಂಗಾಪೂರದ ಯೋ ಜಿಯಾ ಮಿನ್ ಅವರನ್ನು 21-19, 21-17 ನೇರ ಗೇಮ್ಗಳಿಂದ ಮಣಿಸಿದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರು.
ಸಿಂಧು ಚಿನ್ನ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಿವಿ ಸಿಂಧೂ ಚಾಂಪಿಯನ್ಗಳ ಚಾಂಪಿಯನ್. ಎಕ್ಸಲೆಂಟ್ ಅನ್ನೋದನ್ನು ಸಿಂಧೂ ಪದೆ ಪದೇ ಸಾಬೀತುಪಡಿಸಿದ್ದಾಳೆ. ಸಿಂಧೂ ಸಮರ್ಪಣೆ ಮತ್ತು ಬದ್ಧತೆ ವಿಸ್ಮಯಕಾರಿಯಾಗಿದೆ. ಚಿನ್ನ ಗೆದ್ದ ಸಿಂಧೂಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…