ಕ್ರೀಡೆ

ಕಾಮನ್​ವೆಲ್ತ್​ ಗೇಮ್ಸ್: ಟೇಬಲ್​ ಟೆನ್ನಿಸ್‌ ಸಿಂಗಲ್‌ನಲ್ಲಿ ಕಂಚಿನ ಪದಕ ಗೆದ್ದ ಸತ್ಯಜಿತ್‌

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.

ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್​ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್‌ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.

ಪೌಲ್ ಡ್ರಿಂಕ್‌ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್​ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್​ಗಳನ್ನು ಗೆದ್ದರು. ಈ ಮೂಲಕ  3-3  ಅಂತರದಿಂದ ಸಮಬಲ ಸಾಧಿಸಿದರು.

ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್​ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.

andolana

Recent Posts

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

10 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

17 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

1 hour ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago