ಕ್ರೀಡೆ

ಕಾಮನ್​ವೆಲ್ತ್​ ಗೇಮ್ಸ್: ಟೇಬಲ್​ ಟೆನ್ನಿಸ್‌ ಸಿಂಗಲ್‌ನಲ್ಲಿ ಕಂಚಿನ ಪದಕ ಗೆದ್ದ ಸತ್ಯಜಿತ್‌

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.

ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್​ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್‌ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.

ಪೌಲ್ ಡ್ರಿಂಕ್‌ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್​ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್​ಗಳನ್ನು ಗೆದ್ದರು. ಈ ಮೂಲಕ  3-3  ಅಂತರದಿಂದ ಸಮಬಲ ಸಾಧಿಸಿದರು.

ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್​ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.

andolana

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

6 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

18 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago