ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷ ಟೇಬಲ್ ಟೆನ್ನಿಸ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್ ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.
ಆತಿಥೇಯ ಇಂಗ್ಲೆಂಡ್ನ ಪೌಲ್ ಡ್ರಿಂಕ್ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.
ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.
ಪೌಲ್ ಡ್ರಿಂಕ್ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್ಗಳನ್ನು ಗೆದ್ದರು. ಈ ಮೂಲಕ 3-3 ಅಂತರದಿಂದ ಸಮಬಲ ಸಾಧಿಸಿದರು.
ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…