ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷ ಟೇಬಲ್ ಟೆನ್ನಿಸ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್ ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.
ಆತಿಥೇಯ ಇಂಗ್ಲೆಂಡ್ನ ಪೌಲ್ ಡ್ರಿಂಕ್ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.
ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.
ಪೌಲ್ ಡ್ರಿಂಕ್ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್ಗಳನ್ನು ಗೆದ್ದರು. ಈ ಮೂಲಕ 3-3 ಅಂತರದಿಂದ ಸಮಬಲ ಸಾಧಿಸಿದರು.
ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…