ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷ ಟೇಬಲ್ ಟೆನ್ನಿಸ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್ ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.
ಆತಿಥೇಯ ಇಂಗ್ಲೆಂಡ್ನ ಪೌಲ್ ಡ್ರಿಂಕ್ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.
ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.
ಪೌಲ್ ಡ್ರಿಂಕ್ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್ಗಳನ್ನು ಗೆದ್ದರು. ಈ ಮೂಲಕ 3-3 ಅಂತರದಿಂದ ಸಮಬಲ ಸಾಧಿಸಿದರು.
ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…