ಕ್ರೀಡೆ

ಕಾಮನ್​ವೆಲ್ತ್​ ಗೇಮ್ಸ್: ಟೇಬಲ್​ ಟೆನ್ನಿಸ್‌ ಸಿಂಗಲ್‌ನಲ್ಲಿ ಕಂಚಿನ ಪದಕ ಗೆದ್ದ ಸತ್ಯಜಿತ್‌

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.

ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್​ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್‌ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.

ಪೌಲ್ ಡ್ರಿಂಕ್‌ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್​ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್​ಗಳನ್ನು ಗೆದ್ದರು. ಈ ಮೂಲಕ  3-3  ಅಂತರದಿಂದ ಸಮಬಲ ಸಾಧಿಸಿದರು.

ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್​ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

10 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

10 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

11 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

11 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

11 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

11 hours ago