ಕ್ರೀಡೆ

ಕಾಮನ್​ವೆಲ್ತ್​ ಗೇಮ್ಸ್: ಟೇಬಲ್​ ಟೆನ್ನಿಸ್‌ ಸಿಂಗಲ್‌ನಲ್ಲಿ ಕಂಚಿನ ಪದಕ ಗೆದ್ದ ಸತ್ಯಜಿತ್‌

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.

ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್​ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್‌ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.

ಪೌಲ್ ಡ್ರಿಂಕ್‌ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್​ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್​ಗಳನ್ನು ಗೆದ್ದರು. ಈ ಮೂಲಕ  3-3  ಅಂತರದಿಂದ ಸಮಬಲ ಸಾಧಿಸಿದರು.

ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್​ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

4 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

4 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

4 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

4 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

4 hours ago