ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷ ಟೇಬಲ್ ಟೆನ್ನಿಸ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್ ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.
ಆತಿಥೇಯ ಇಂಗ್ಲೆಂಡ್ನ ಪೌಲ್ ಡ್ರಿಂಕ್ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.
ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.
ಪೌಲ್ ಡ್ರಿಂಕ್ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್ಗಳನ್ನು ಗೆದ್ದರು. ಈ ಮೂಲಕ 3-3 ಅಂತರದಿಂದ ಸಮಬಲ ಸಾಧಿಸಿದರು.
ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…