ಕ್ರೀಡೆ

ಕಾಮನ್​ವೆಲ್ತ್​ ಗೇಮ್ಸ್: ಟೇಬಲ್​ ಟೆನ್ನಿಸ್‌ ಸಿಂಗಲ್‌ನಲ್ಲಿ ಕಂಚಿನ ಪದಕ ಗೆದ್ದ ಸತ್ಯಜಿತ್‌

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.

ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್​ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್‌ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.

ಪೌಲ್ ಡ್ರಿಂಕ್‌ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್​ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್​ಗಳನ್ನು ಗೆದ್ದರು. ಈ ಮೂಲಕ  3-3  ಅಂತರದಿಂದ ಸಮಬಲ ಸಾಧಿಸಿದರು.

ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್​ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

4 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

14 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

18 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

19 hours ago