ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷ ಟೇಬಲ್ ಟೆನ್ನಿಸ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್ ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.
ಆತಿಥೇಯ ಇಂಗ್ಲೆಂಡ್ನ ಪೌಲ್ ಡ್ರಿಂಕ್ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.
ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.
ಪೌಲ್ ಡ್ರಿಂಕ್ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್ಗಳನ್ನು ಗೆದ್ದರು. ಈ ಮೂಲಕ 3-3 ಅಂತರದಿಂದ ಸಮಬಲ ಸಾಧಿಸಿದರು.
ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…