ಕ್ರೀಡೆ

ಕಾಮನ್​ವೆಲ್ತ್​ ಗೇಮ್ಸ್: ಟೇಬಲ್​ ಟೆನ್ನಿಸ್‌ ಸಿಂಗಲ್‌ನಲ್ಲಿ ಕಂಚಿನ ಪದಕ ಗೆದ್ದ ಸತ್ಯಜಿತ್‌

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ.

ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್​ಗಳನ್ನು ಕೈಚೆಲ್ಲಿದ್ದರು. ಆದರೆ, ನಿರ್ಣಾಯಕ ಗೇಮ್‌ನಲ್ಲಿ ತಿರುಗೇಟು ನೀಡುವ ಮೂಲ ಅಮೋಘ ಆಟ ಪ್ರದರ್ಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.

ಪೌಲ್ ಡ್ರಿಂಕ್‌ಹಾಲ್ ವಿರುದ್ದ ಅದ್ಭುತ ಆಟ ಪ್ರದರ್ಶಿಸಿದ ಸತ್ಯನ್, ಆರಂಭದಲ್ಲೇ ಸತತ ಮೂರು ಸೆಟ್​ಗಳನ್ನು ಗೆದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ ಪೌಲ್ ಕೂಡ ಮೂರು ಸೆಟ್​ಗಳನ್ನು ಗೆದ್ದರು. ಈ ಮೂಲಕ  3-3  ಅಂತರದಿಂದ ಸಮಬಲ ಸಾಧಿಸಿದರು.

ಇದರಿಂದ ಪಂದ್ಯವು 7ನೇ ಸುತ್ತಿನತ್ತ ಸಾಗಿತು. ಇಲ್ಲಿ ಸತ್ಯನ್ ಉತ್ತಮ ಆರಂಭ ಪಡೆದು 7-1 ಮುನ್ನಡೆ ಪಡೆದರು. ಆದರೆ ಮತ್ತೊಮ್ಮೆ ಕಂಬ್ಯಾಕ್ ಮಾಡಿದ ಪೌಲ್ ಸ್ಕೋರ್ ಅನ್ನು 8-8 ಸಮಬಲಗೊಳಿಸಿದರು. ಅದಾಗ್ಯೂ ರೋಚಕ ಹೋರಾಟದಲ್ಲಿ ಅಂತಿಮವಾಗಿ ಕೇವಲ 2 ಪಾಯಿಂಟ್​ಗಳ ಮುನ್ನಡೆಯೊಂದಿಗೆ ಸತ್ಯನ್ 11-9 ಅಂಕಗಳ ಮೂಲಕ ಜಯ ಸಾಧಿಸಿದರು. ಈ ಮೂಲಕ 4-3 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿದ್ದಾರೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago