ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ : ಕುಸ್ತಿಪಟು ದೀಪಕ್ ಪೂನಿಯಾ ಗೆ ಚಿನ್ನ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ.

ದೀಪಕ್ ಪೂನಿಯಾ

ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ ನ ಶೆಕು ಕಸ್ಸೆಗ್ಬಾಮಾ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ಬಂದಿದ್ದರು.

ದೀಪಕ್ ಪೂನಿಯಾ

ಬಳಿಕ ಪುರುಷರ 86 ಕೆಜಿ ವಿಭಾಗದ ಫೈನಲ್ ನಲ್ಲಿ ಪಾಕಿಸ್ತಾನದ ಕುಸ್ತಿಪಟು ಮೊಹಮ್ಮದ್ ಇನಾಮ್ ಅವರನ್ನು ಸೋಲಿಸಿ ಚಿನ್ನವನ್ನು ಗೆದ್ದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದೀಪಕ್ ಪೂನಿಯಾ ಅವರಿಗೆ ಇದು ಮೊದಲ ಚಿನ್ನದ ಪದಕವಾಗಿದೆ.

ದೀಪಕ್ ಪೂನಿಯಾ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಒಂಬತ್ತನೇ ಚಿನ್ನದ ಪದಕವಾಗಿದ್ದು ಕುಸ್ತಿಯಲ್ಲಿ ಮೂರನೇ ಪದಕವಾಗಿದೆ.

ಇವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ದೀಪಕ್ ಪುನಿಯಾ ಅವರ ಅದ್ಭುತ ಕ್ರೀಡಾ ಪ್ರದರ್ಶನದ ಬಗ್ಗೆ ಹೆಮ್ಮೆಯ ಭಾವನೆ! ಅವರು ಭಾರತದ ಹೆಮ್ಮೆ ಮತ್ತು ಭಾರತಕ್ಕೆ ಅನೇಕ ಪ್ರಶಸ್ತಿಗಳನ್ನು ನೀಡಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಟ್ವೀಟ್‌ ಮಾಡಿದ್ದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಮ್ಮ ಯುವ ಕುಸ್ತಿಪಟು ದೀಪಕ್ ಪುನಿಯಾ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ವೀಕ್ಷಿಸಲು ಆಕರ್ಷಕವಾಗಿತ್ತು. ನೀವು ಭಾರತಕ್ಕೆ ದೊಡ್ಡ ಸಂತೋಷ ಮತ್ತು ವೈಭವವನ್ನು ತಂದಿದ್ದೀರಿ ಎಂದು ಅಭಿನಂದಿಸಿದ್ದಾರೆ. 

 

andolanait

Recent Posts

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

6 mins ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

29 mins ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

56 mins ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

1 hour ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

1 hour ago

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

1 hour ago