ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ : ಕುಸ್ತಿಪಟು ದೀಪಕ್ ಪೂನಿಯಾ ಗೆ ಚಿನ್ನ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ.

ದೀಪಕ್ ಪೂನಿಯಾ

ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ ನ ಶೆಕು ಕಸ್ಸೆಗ್ಬಾಮಾ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ಬಂದಿದ್ದರು.

ದೀಪಕ್ ಪೂನಿಯಾ

ಬಳಿಕ ಪುರುಷರ 86 ಕೆಜಿ ವಿಭಾಗದ ಫೈನಲ್ ನಲ್ಲಿ ಪಾಕಿಸ್ತಾನದ ಕುಸ್ತಿಪಟು ಮೊಹಮ್ಮದ್ ಇನಾಮ್ ಅವರನ್ನು ಸೋಲಿಸಿ ಚಿನ್ನವನ್ನು ಗೆದ್ದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದೀಪಕ್ ಪೂನಿಯಾ ಅವರಿಗೆ ಇದು ಮೊದಲ ಚಿನ್ನದ ಪದಕವಾಗಿದೆ.

ದೀಪಕ್ ಪೂನಿಯಾ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಒಂಬತ್ತನೇ ಚಿನ್ನದ ಪದಕವಾಗಿದ್ದು ಕುಸ್ತಿಯಲ್ಲಿ ಮೂರನೇ ಪದಕವಾಗಿದೆ.

ಇವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ದೀಪಕ್ ಪುನಿಯಾ ಅವರ ಅದ್ಭುತ ಕ್ರೀಡಾ ಪ್ರದರ್ಶನದ ಬಗ್ಗೆ ಹೆಮ್ಮೆಯ ಭಾವನೆ! ಅವರು ಭಾರತದ ಹೆಮ್ಮೆ ಮತ್ತು ಭಾರತಕ್ಕೆ ಅನೇಕ ಪ್ರಶಸ್ತಿಗಳನ್ನು ನೀಡಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಟ್ವೀಟ್‌ ಮಾಡಿದ್ದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಮ್ಮ ಯುವ ಕುಸ್ತಿಪಟು ದೀಪಕ್ ಪುನಿಯಾ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ವೀಕ್ಷಿಸಲು ಆಕರ್ಷಕವಾಗಿತ್ತು. ನೀವು ಭಾರತಕ್ಕೆ ದೊಡ್ಡ ಸಂತೋಷ ಮತ್ತು ವೈಭವವನ್ನು ತಂದಿದ್ದೀರಿ ಎಂದು ಅಭಿನಂದಿಸಿದ್ದಾರೆ. 

 

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago