ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ : ಕುಸ್ತಿಪಟು ದೀಪಕ್ ಪೂನಿಯಾ ಗೆ ಚಿನ್ನ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ.

ದೀಪಕ್ ಪೂನಿಯಾ

ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ ನ ಶೆಕು ಕಸ್ಸೆಗ್ಬಾಮಾ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ಬಂದಿದ್ದರು.

ದೀಪಕ್ ಪೂನಿಯಾ

ಬಳಿಕ ಪುರುಷರ 86 ಕೆಜಿ ವಿಭಾಗದ ಫೈನಲ್ ನಲ್ಲಿ ಪಾಕಿಸ್ತಾನದ ಕುಸ್ತಿಪಟು ಮೊಹಮ್ಮದ್ ಇನಾಮ್ ಅವರನ್ನು ಸೋಲಿಸಿ ಚಿನ್ನವನ್ನು ಗೆದ್ದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದೀಪಕ್ ಪೂನಿಯಾ ಅವರಿಗೆ ಇದು ಮೊದಲ ಚಿನ್ನದ ಪದಕವಾಗಿದೆ.

ದೀಪಕ್ ಪೂನಿಯಾ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಒಂಬತ್ತನೇ ಚಿನ್ನದ ಪದಕವಾಗಿದ್ದು ಕುಸ್ತಿಯಲ್ಲಿ ಮೂರನೇ ಪದಕವಾಗಿದೆ.

ಇವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ದೀಪಕ್ ಪುನಿಯಾ ಅವರ ಅದ್ಭುತ ಕ್ರೀಡಾ ಪ್ರದರ್ಶನದ ಬಗ್ಗೆ ಹೆಮ್ಮೆಯ ಭಾವನೆ! ಅವರು ಭಾರತದ ಹೆಮ್ಮೆ ಮತ್ತು ಭಾರತಕ್ಕೆ ಅನೇಕ ಪ್ರಶಸ್ತಿಗಳನ್ನು ನೀಡಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಟ್ವೀಟ್‌ ಮಾಡಿದ್ದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಮ್ಮ ಯುವ ಕುಸ್ತಿಪಟು ದೀಪಕ್ ಪುನಿಯಾ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ವೀಕ್ಷಿಸಲು ಆಕರ್ಷಕವಾಗಿತ್ತು. ನೀವು ಭಾರತಕ್ಕೆ ದೊಡ್ಡ ಸಂತೋಷ ಮತ್ತು ವೈಭವವನ್ನು ತಂದಿದ್ದೀರಿ ಎಂದು ಅಭಿನಂದಿಸಿದ್ದಾರೆ. 

 

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

3 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

3 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

3 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

4 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

4 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

4 hours ago