ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ : ಕುಸ್ತಿಪಟು ದೀಪಕ್ ಪೂನಿಯಾ ಗೆ ಚಿನ್ನ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ.

ದೀಪಕ್ ಪೂನಿಯಾ

ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ ನ ಶೆಕು ಕಸ್ಸೆಗ್ಬಾಮಾ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ಬಂದಿದ್ದರು.

ದೀಪಕ್ ಪೂನಿಯಾ

ಬಳಿಕ ಪುರುಷರ 86 ಕೆಜಿ ವಿಭಾಗದ ಫೈನಲ್ ನಲ್ಲಿ ಪಾಕಿಸ್ತಾನದ ಕುಸ್ತಿಪಟು ಮೊಹಮ್ಮದ್ ಇನಾಮ್ ಅವರನ್ನು ಸೋಲಿಸಿ ಚಿನ್ನವನ್ನು ಗೆದ್ದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದೀಪಕ್ ಪೂನಿಯಾ ಅವರಿಗೆ ಇದು ಮೊದಲ ಚಿನ್ನದ ಪದಕವಾಗಿದೆ.

ದೀಪಕ್ ಪೂನಿಯಾ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಒಂಬತ್ತನೇ ಚಿನ್ನದ ಪದಕವಾಗಿದ್ದು ಕುಸ್ತಿಯಲ್ಲಿ ಮೂರನೇ ಪದಕವಾಗಿದೆ.

ಇವರ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ದೀಪಕ್ ಪುನಿಯಾ ಅವರ ಅದ್ಭುತ ಕ್ರೀಡಾ ಪ್ರದರ್ಶನದ ಬಗ್ಗೆ ಹೆಮ್ಮೆಯ ಭಾವನೆ! ಅವರು ಭಾರತದ ಹೆಮ್ಮೆ ಮತ್ತು ಭಾರತಕ್ಕೆ ಅನೇಕ ಪ್ರಶಸ್ತಿಗಳನ್ನು ನೀಡಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಟ್ವೀಟ್‌ ಮಾಡಿದ್ದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಮ್ಮ ಯುವ ಕುಸ್ತಿಪಟು ದೀಪಕ್ ಪುನಿಯಾ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ವೀಕ್ಷಿಸಲು ಆಕರ್ಷಕವಾಗಿತ್ತು. ನೀವು ಭಾರತಕ್ಕೆ ದೊಡ್ಡ ಸಂತೋಷ ಮತ್ತು ವೈಭವವನ್ನು ತಂದಿದ್ದೀರಿ ಎಂದು ಅಭಿನಂದಿಸಿದ್ದಾರೆ. 

 

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago