ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಆ ಆಟಗಾರ ತಂಡದಿಂದ ಬೇರ್ಪಟ್ಟು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್ನಲ್ಲಿರಬೇಕಿತ್ತು. ಆದರೆ, ಇತ್ತೀಚೆಗೆ ಐಸಿಸಿ ಇದರಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ಕೊರೊನಾ ಸೋಂಕಿತ ಆಟಗಾರರಿಗೂ ವಿಶ್ವಕಪ್ನಲ್ಲಿ ಆಡಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದೆ.
ಈ ಹಿಂದೆ ನಡೆದ 2022 ರ ಕಾಮನ್ವೆಲ್ತ್ ಗೇಮ್ಸ್ ಫೈನಲ್ನಲ್ಲೂ ಕೊರೊನಾ ಸೋಂಕಿತ ಆಟಗಾರರಿಗೆ ತಂಡದಲ್ಲಿ ಆಡಲು ಐಸಿಸಿ ಅವಕಾಶ ನೀಡಿತ್ತು. ಕಾಮನ್ವೆಲ್ ಗೇಮ್ಸ್ ಫೈನಲ್ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಆಲ್ರೌಂಡರ್ ತಹ್ಲಿಯಾ ಮೆಕ್ಗ್ರಾತ್ಗೆ ಕೊರೊನಾ ಸೋಂಕು ತಗುಲಿತ್ತು. ಆದರೂ ಐಸಿಸಿ ಅವರಿಗೆ ತಂಡದಲ್ಲಿ ಆಡಲು ಅವಕಾಶ ನೀಡಿತ್ತು. ಆದರೆ ತಹ್ಲಿಯಾ ಮಾಸ್ಕ್ ಹಾಕಿಕೊಂಡು ತಂಡದಿಂದ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ಸೂಚಿಸಲಾಗಿತ್ತು. ನಂತರ ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದ ನಂತರ ತನ್ನ ಸಹ ಆಟಗಾರರೊಂದಿಗೆ ಸಂಭ್ರಮಿಸುವುದಕ್ಕೆ ಅವರಿಗೆ ಅವಕಾಶ ನೀಡಿತ್ತು.
ಈಗ ಐಸಿಸಿ ಹೊರಡಿಸಿರುವ ನಿಯಮಾವಳಿಗಳ ಪ್ರಕಾರ ಯಾವುದೇ ಆಟಗಾರ ಸೋಂಕಿಗೆ ತುತ್ತಾದರೆ ಆತನನ್ನು ಕ್ವಾರಂಟೈನ್ನಲ್ಲಿರಿಸುವಂತಿಲ್ಲ. ಸೋಂಕು ತಗುಲಿದ ಆಟಗಾರ ದೈಹಿಕವಾಗಿ ಸದೃಢರಾಗಿದ್ದರೆ ಆತ ತಂಡದಲ್ಲಿ ಆಡಬಹುದು. ಆದರೆ ಇದಕ್ಕೆ ವೈದ್ಯರ ಅನುಮತಿ ಅವಶ್ಯಕ. ಹಾಗೆಯೇ ಪಂದ್ಯಾವಳಿಯ ಸಮಯದಲ್ಲೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಇರುವುದಿಲ್ಲ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆಯೂ ಸಹ ಕುಂಠಿತಗೊಂಡಿದ್ದು, ಎಲ್ಲರೂ ಸಹ ಲಸಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಐಸಿಸಿ ಹೇಳಿಕೊಂಡಿದೆ.
ಪಂದ್ಯದ ಬಗ್ಗೆ ಐಸಿಸಿ ನಿಯಮಗಳು
ಪಾಯಿಂಟ್ ವ್ಯವಸ್ಥೆಯ ಪ್ರಕಾರ, ಪಂದ್ಯಾವಳಿಯಲ್ಲಿ ಒಂದು ಪಂದ್ಯದಲ್ಲಿ ಗೆದ್ದ ತಂಡಕ್ಕೆ 2 ಅಂಕಗಳನ್ನು ನೀಡಲಾಗುತ್ತದೆ. ಹಾಗೆಯೇ ಸೋತ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಪಂದ್ಯವು ಟೈ ಆದರೆ ಅಥವಾ ಮಳೆಯಿಂದ ರದ್ದಾದರೆ ಆಗ ಎರಡೂ ತಂಡಗಳಿಗು ತಲಾ 1 ಅಂಕಗಳನ್ನು ನೀಡಲಾಗುತ್ತದೆ. ಅರ್ಹತಾ ಮತ್ತು ಸೂಪರ್-12 ಸುತ್ತುಗಳಿಗೆ ಯಾವುದೇ ಮೀಸಲು ದಿನವನ್ನು ನಿಗದಿಪಡಿಸಿಲ್ಲ. ಅಂದರೆ ಪಂದ್ಯವನ್ನು ರದ್ದುಗೊಳಿಸಿದರೆ, ಅದನ್ನು ರದ್ದತಿ ಎಂದು ಪರಿಗಣಿಸಲಾಗುತ್ತದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…