ಕ್ರೀಡೆ

ಕೊರೊನಾ ಸೋಂಕಿಗೆ ಒಳಪಟ್ಟರು ಟಿ20 ವಿಶ್ವಕಪ್‌ ಆಡಲು ಅವಕಾಶ : ಬಿಸಿಸಿಐ ಘೋಷಣೆ

ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಆ ಆಟಗಾರ ತಂಡದಿಂದ ಬೇರ್ಪಟ್ಟು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್​ನಲ್ಲಿರಬೇಕಿತ್ತು. ಆದರೆ, ಇತ್ತೀಚೆಗೆ ಐಸಿಸಿ ಇದರಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ಕೊರೊನಾ ಸೋಂಕಿತ ಆಟಗಾರರಿಗೂ ವಿಶ್ವಕಪ್‌ನಲ್ಲಿ ಆಡಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದೆ.

ಈ ಹಿಂದೆ ನಡೆದ 2022 ರ ಕಾಮನ್‌ವೆಲ್ತ್ ಗೇಮ್ಸ್ ಫೈನಲ್‌ನಲ್ಲೂ ಕೊರೊನಾ ಸೋಂಕಿತ ಆಟಗಾರರಿಗೆ ತಂಡದಲ್ಲಿ ಆಡಲು ಐಸಿಸಿ ಅವಕಾಶ ನೀಡಿತ್ತು. ಕಾಮನ್​ವೆಲ್​ ಗೇಮ್ಸ್​ ಫೈನಲ್​ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ತಹ್ಲಿಯಾ ಮೆಕ್‌ಗ್ರಾತ್​ಗೆ ಕೊರೊನಾ ಸೋಂಕು ತಗುಲಿತ್ತು. ಆದರೂ ಐಸಿಸಿ ಅವರಿಗೆ ತಂಡದಲ್ಲಿ ಆಡಲು ಅವಕಾಶ ನೀಡಿತ್ತು. ಆದರೆ ತಹ್ಲಿಯಾ ಮಾಸ್ಕ್ ಹಾಕಿಕೊಂಡು ತಂಡದಿಂದ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ಸೂಚಿಸಲಾಗಿತ್ತು. ನಂತರ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದ ನಂತರ ತನ್ನ ಸಹ ಆಟಗಾರರೊಂದಿಗೆ ಸಂಭ್ರಮಿಸುವುದಕ್ಕೆ ಅವರಿಗೆ ಅವಕಾಶ ನೀಡಿತ್ತು.

ಈಗ ಐಸಿಸಿ ಹೊರಡಿಸಿರುವ ನಿಯಮಾವಳಿಗಳ ಪ್ರಕಾರ ಯಾವುದೇ ಆಟಗಾರ ಸೋಂಕಿಗೆ ತುತ್ತಾದರೆ ಆತನನ್ನು ಕ್ವಾರಂಟೈನ್​ನಲ್ಲಿರಿಸುವಂತಿಲ್ಲ. ಸೋಂಕು ತಗುಲಿದ ಆಟಗಾರ ದೈಹಿಕವಾಗಿ ಸದೃಢರಾಗಿದ್ದರೆ ಆತ ತಂಡದಲ್ಲಿ ಆಡಬಹುದು. ಆದರೆ ಇದಕ್ಕೆ ವೈದ್ಯರ ಅನುಮತಿ ಅವಶ್ಯಕ. ಹಾಗೆಯೇ ಪಂದ್ಯಾವಳಿಯ ಸಮಯದಲ್ಲೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಇರುವುದಿಲ್ಲ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆಯೂ ಸಹ ಕುಂಠಿತಗೊಂಡಿದ್ದು, ಎಲ್ಲರೂ ಸಹ ಲಸಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಐಸಿಸಿ ಹೇಳಿಕೊಂಡಿದೆ.

ಪಂದ್ಯದ ಬಗ್ಗೆ ಐಸಿಸಿ ನಿಯಮಗಳು

ಪಾಯಿಂಟ್ ವ್ಯವಸ್ಥೆಯ ಪ್ರಕಾರ, ಪಂದ್ಯಾವಳಿಯಲ್ಲಿ ಒಂದು ಪಂದ್ಯದಲ್ಲಿ ಗೆದ್ದ ತಂಡಕ್ಕೆ 2 ಅಂಕಗಳನ್ನು ನೀಡಲಾಗುತ್ತದೆ. ಹಾಗೆಯೇ ಸೋತ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಪಂದ್ಯವು ಟೈ ಆದರೆ ಅಥವಾ ಮಳೆಯಿಂದ ರದ್ದಾದರೆ ಆಗ ಎರಡೂ ತಂಡಗಳಿಗು ತಲಾ 1 ಅಂಕಗಳನ್ನು ನೀಡಲಾಗುತ್ತದೆ. ಅರ್ಹತಾ ಮತ್ತು ಸೂಪರ್-12 ಸುತ್ತುಗಳಿಗೆ ಯಾವುದೇ ಮೀಸಲು ದಿನವನ್ನು ನಿಗದಿಪಡಿಸಿಲ್ಲ. ಅಂದರೆ ಪಂದ್ಯವನ್ನು ರದ್ದುಗೊಳಿಸಿದರೆ, ಅದನ್ನು ರದ್ದತಿ ಎಂದು ಪರಿಗಣಿಸಲಾಗುತ್ತದೆ.

andolana

Recent Posts

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

1 second ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

36 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

4 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

4 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

4 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

4 hours ago