ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಆ ಆಟಗಾರ ತಂಡದಿಂದ ಬೇರ್ಪಟ್ಟು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್ನಲ್ಲಿರಬೇಕಿತ್ತು. ಆದರೆ, ಇತ್ತೀಚೆಗೆ ಐಸಿಸಿ ಇದರಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ಕೊರೊನಾ ಸೋಂಕಿತ ಆಟಗಾರರಿಗೂ ವಿಶ್ವಕಪ್ನಲ್ಲಿ ಆಡಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದೆ.
ಈ ಹಿಂದೆ ನಡೆದ 2022 ರ ಕಾಮನ್ವೆಲ್ತ್ ಗೇಮ್ಸ್ ಫೈನಲ್ನಲ್ಲೂ ಕೊರೊನಾ ಸೋಂಕಿತ ಆಟಗಾರರಿಗೆ ತಂಡದಲ್ಲಿ ಆಡಲು ಐಸಿಸಿ ಅವಕಾಶ ನೀಡಿತ್ತು. ಕಾಮನ್ವೆಲ್ ಗೇಮ್ಸ್ ಫೈನಲ್ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಆಲ್ರೌಂಡರ್ ತಹ್ಲಿಯಾ ಮೆಕ್ಗ್ರಾತ್ಗೆ ಕೊರೊನಾ ಸೋಂಕು ತಗುಲಿತ್ತು. ಆದರೂ ಐಸಿಸಿ ಅವರಿಗೆ ತಂಡದಲ್ಲಿ ಆಡಲು ಅವಕಾಶ ನೀಡಿತ್ತು. ಆದರೆ ತಹ್ಲಿಯಾ ಮಾಸ್ಕ್ ಹಾಕಿಕೊಂಡು ತಂಡದಿಂದ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ಸೂಚಿಸಲಾಗಿತ್ತು. ನಂತರ ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದ ನಂತರ ತನ್ನ ಸಹ ಆಟಗಾರರೊಂದಿಗೆ ಸಂಭ್ರಮಿಸುವುದಕ್ಕೆ ಅವರಿಗೆ ಅವಕಾಶ ನೀಡಿತ್ತು.
ಈಗ ಐಸಿಸಿ ಹೊರಡಿಸಿರುವ ನಿಯಮಾವಳಿಗಳ ಪ್ರಕಾರ ಯಾವುದೇ ಆಟಗಾರ ಸೋಂಕಿಗೆ ತುತ್ತಾದರೆ ಆತನನ್ನು ಕ್ವಾರಂಟೈನ್ನಲ್ಲಿರಿಸುವಂತಿಲ್ಲ. ಸೋಂಕು ತಗುಲಿದ ಆಟಗಾರ ದೈಹಿಕವಾಗಿ ಸದೃಢರಾಗಿದ್ದರೆ ಆತ ತಂಡದಲ್ಲಿ ಆಡಬಹುದು. ಆದರೆ ಇದಕ್ಕೆ ವೈದ್ಯರ ಅನುಮತಿ ಅವಶ್ಯಕ. ಹಾಗೆಯೇ ಪಂದ್ಯಾವಳಿಯ ಸಮಯದಲ್ಲೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಇರುವುದಿಲ್ಲ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆಯೂ ಸಹ ಕುಂಠಿತಗೊಂಡಿದ್ದು, ಎಲ್ಲರೂ ಸಹ ಲಸಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಐಸಿಸಿ ಹೇಳಿಕೊಂಡಿದೆ.
ಪಂದ್ಯದ ಬಗ್ಗೆ ಐಸಿಸಿ ನಿಯಮಗಳು
ಪಾಯಿಂಟ್ ವ್ಯವಸ್ಥೆಯ ಪ್ರಕಾರ, ಪಂದ್ಯಾವಳಿಯಲ್ಲಿ ಒಂದು ಪಂದ್ಯದಲ್ಲಿ ಗೆದ್ದ ತಂಡಕ್ಕೆ 2 ಅಂಕಗಳನ್ನು ನೀಡಲಾಗುತ್ತದೆ. ಹಾಗೆಯೇ ಸೋತ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಪಂದ್ಯವು ಟೈ ಆದರೆ ಅಥವಾ ಮಳೆಯಿಂದ ರದ್ದಾದರೆ ಆಗ ಎರಡೂ ತಂಡಗಳಿಗು ತಲಾ 1 ಅಂಕಗಳನ್ನು ನೀಡಲಾಗುತ್ತದೆ. ಅರ್ಹತಾ ಮತ್ತು ಸೂಪರ್-12 ಸುತ್ತುಗಳಿಗೆ ಯಾವುದೇ ಮೀಸಲು ದಿನವನ್ನು ನಿಗದಿಪಡಿಸಿಲ್ಲ. ಅಂದರೆ ಪಂದ್ಯವನ್ನು ರದ್ದುಗೊಳಿಸಿದರೆ, ಅದನ್ನು ರದ್ದತಿ ಎಂದು ಪರಿಗಣಿಸಲಾಗುತ್ತದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…