ಕ್ರೀಡೆ

ಟಿ10 ಲೀಗ್‌ನಲ್ಲಿ ಭ್ರಷ್ಟ ಚಟುವಟಿಕೆ: ಮೂವರು ಭಾರತೀಯರು ಸೇರಿ 8 ಮಂದಿ ವಿರುದ್ಧ ಐಸಿಸಿ ಆರೋಪಪಟ್ಟಿ

ನವದೆಹಲಿ: 2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ.

ಭಾರತೀಯ ತಂಡಗಳ ಮಾಲಿಕರಾದ ಪರಾಗ್ ಸಂಘ್ವಿ, ಕೃಷನ್ ಕುಮಾರ್ ಚೌಧರಿ ಅವರುಗಳ ವಿರುದ್ಧವೂ ಎಮಿರೇಟ್ಸ್ ಟಿ10 ಲೀಗ್ ನ 2021 ನೇ ಆವೃತ್ತಿಯಲ್ಲಿ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಆರೋಪ ಹೊರಿಸಲಾಗಿದೆ.

ಇಬ್ಬರು ಭಾರತೀಯರು ಪುಣೆ ಡೆವಿಲ್ಸ್ ನ ಸಹ ಮಾಲಿಕರಾಗಿದ್ದು, ಓರ್ವ ಕ್ರೀಡಾಪಟು ಬಾಂಗ್ಲಾದೇಶದ  ಮಾಜಿ ಬ್ಯಾಟ್ಸ್ಮನ್ ನಾಸಿಸ್ ಹುಸೇನ್ ವಿರುದ್ಧವೂ ಭ್ರಷ್ಟಾಚಾರ ಚಟುವಟಿಕೆಗಳ ಆರೋಪ ಕೇಳಿ ಬಂದಿದೆ. ಪ್ರಕರಣದ ಮೂರನೇ ಆರೋಪಿಯನ್ನಾಗಿ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದ ಸನ್ನಿ ಧಿಲ್ಲೋನ್ ಅವರನ್ನು ಉಲ್ಲೇಖಿಸಲಾಗಿದೆ.

“2021 ರ ಅಬುಧಾಬಿ T10 ಕ್ರಿಕೆಟ್ ಲೀಗ್‌ಗೆ ಸಂಬಂಧಿಸಿದ ಆರೋಪಗಳು ಮತ್ತು ಆ ಪಂದ್ಯಾವಳಿಯಲ್ಲಿನ ಪಂದ್ಯಗಳನ್ನು ಭ್ರಷ್ಟಗೊಳಿಸುವ ಪ್ರಯತ್ನಗಳು ನಡೆದಿದ್ದವು – ಈ ಪ್ರಯತ್ನಗಳನ್ನು ವಿಫಲಗೊಳಿಸಲಾಗಿತ್ತು.

ಟೂರ್ನಮೆಂಟ್ ನಲ್ಲಿ ಇಸಿಬಿಯ ನೀತಿ ಸಂಹಿತೆಯ ಪಾಲನೆಗಾಗಿ ಐಸಿಸಿಯನ್ನು ಭ್ರಷ್ಟಾಚಾರ ವಿರೋಧಿ ಅಧಿಕಾರಿ (ಡಿಎಸಿಒ)ಯನ್ನಾಗಿ ನೇಮಕ ಮಾಡಲಾಗಿತ್ತು ಎಂದು ಐಸಿಸಿ ಹೇಳಿದೆ.

ಮೂವರು ಭಾರತೀಯರು ಸೇರಿದಂತೆ ಆರು ಮಂದಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಲು ಮಂಗಳವಾರದಿಂದ 14 ದಿನಗಳ ಕಾಲಾವಕಾಶ ನೀಡಲಾಗಿದೆ.

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

6 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

6 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

6 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

8 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago