ನವದೆಹಲಿ: 2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ.
ಭಾರತೀಯ ತಂಡಗಳ ಮಾಲಿಕರಾದ ಪರಾಗ್ ಸಂಘ್ವಿ, ಕೃಷನ್ ಕುಮಾರ್ ಚೌಧರಿ ಅವರುಗಳ ವಿರುದ್ಧವೂ ಎಮಿರೇಟ್ಸ್ ಟಿ10 ಲೀಗ್ ನ 2021 ನೇ ಆವೃತ್ತಿಯಲ್ಲಿ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಆರೋಪ ಹೊರಿಸಲಾಗಿದೆ.
ಇಬ್ಬರು ಭಾರತೀಯರು ಪುಣೆ ಡೆವಿಲ್ಸ್ ನ ಸಹ ಮಾಲಿಕರಾಗಿದ್ದು, ಓರ್ವ ಕ್ರೀಡಾಪಟು ಬಾಂಗ್ಲಾದೇಶದ ಮಾಜಿ ಬ್ಯಾಟ್ಸ್ಮನ್ ನಾಸಿಸ್ ಹುಸೇನ್ ವಿರುದ್ಧವೂ ಭ್ರಷ್ಟಾಚಾರ ಚಟುವಟಿಕೆಗಳ ಆರೋಪ ಕೇಳಿ ಬಂದಿದೆ. ಪ್ರಕರಣದ ಮೂರನೇ ಆರೋಪಿಯನ್ನಾಗಿ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದ ಸನ್ನಿ ಧಿಲ್ಲೋನ್ ಅವರನ್ನು ಉಲ್ಲೇಖಿಸಲಾಗಿದೆ.
“2021 ರ ಅಬುಧಾಬಿ T10 ಕ್ರಿಕೆಟ್ ಲೀಗ್ಗೆ ಸಂಬಂಧಿಸಿದ ಆರೋಪಗಳು ಮತ್ತು ಆ ಪಂದ್ಯಾವಳಿಯಲ್ಲಿನ ಪಂದ್ಯಗಳನ್ನು ಭ್ರಷ್ಟಗೊಳಿಸುವ ಪ್ರಯತ್ನಗಳು ನಡೆದಿದ್ದವು – ಈ ಪ್ರಯತ್ನಗಳನ್ನು ವಿಫಲಗೊಳಿಸಲಾಗಿತ್ತು.
ಟೂರ್ನಮೆಂಟ್ ನಲ್ಲಿ ಇಸಿಬಿಯ ನೀತಿ ಸಂಹಿತೆಯ ಪಾಲನೆಗಾಗಿ ಐಸಿಸಿಯನ್ನು ಭ್ರಷ್ಟಾಚಾರ ವಿರೋಧಿ ಅಧಿಕಾರಿ (ಡಿಎಸಿಒ)ಯನ್ನಾಗಿ ನೇಮಕ ಮಾಡಲಾಗಿತ್ತು ಎಂದು ಐಸಿಸಿ ಹೇಳಿದೆ.
ಮೂವರು ಭಾರತೀಯರು ಸೇರಿದಂತೆ ಆರು ಮಂದಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಲು ಮಂಗಳವಾರದಿಂದ 14 ದಿನಗಳ ಕಾಲಾವಕಾಶ ನೀಡಲಾಗಿದೆ.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…