ನವದೆಹಲಿ: 2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ.
ಭಾರತೀಯ ತಂಡಗಳ ಮಾಲಿಕರಾದ ಪರಾಗ್ ಸಂಘ್ವಿ, ಕೃಷನ್ ಕುಮಾರ್ ಚೌಧರಿ ಅವರುಗಳ ವಿರುದ್ಧವೂ ಎಮಿರೇಟ್ಸ್ ಟಿ10 ಲೀಗ್ ನ 2021 ನೇ ಆವೃತ್ತಿಯಲ್ಲಿ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಆರೋಪ ಹೊರಿಸಲಾಗಿದೆ.
ಇಬ್ಬರು ಭಾರತೀಯರು ಪುಣೆ ಡೆವಿಲ್ಸ್ ನ ಸಹ ಮಾಲಿಕರಾಗಿದ್ದು, ಓರ್ವ ಕ್ರೀಡಾಪಟು ಬಾಂಗ್ಲಾದೇಶದ ಮಾಜಿ ಬ್ಯಾಟ್ಸ್ಮನ್ ನಾಸಿಸ್ ಹುಸೇನ್ ವಿರುದ್ಧವೂ ಭ್ರಷ್ಟಾಚಾರ ಚಟುವಟಿಕೆಗಳ ಆರೋಪ ಕೇಳಿ ಬಂದಿದೆ. ಪ್ರಕರಣದ ಮೂರನೇ ಆರೋಪಿಯನ್ನಾಗಿ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದ ಸನ್ನಿ ಧಿಲ್ಲೋನ್ ಅವರನ್ನು ಉಲ್ಲೇಖಿಸಲಾಗಿದೆ.
“2021 ರ ಅಬುಧಾಬಿ T10 ಕ್ರಿಕೆಟ್ ಲೀಗ್ಗೆ ಸಂಬಂಧಿಸಿದ ಆರೋಪಗಳು ಮತ್ತು ಆ ಪಂದ್ಯಾವಳಿಯಲ್ಲಿನ ಪಂದ್ಯಗಳನ್ನು ಭ್ರಷ್ಟಗೊಳಿಸುವ ಪ್ರಯತ್ನಗಳು ನಡೆದಿದ್ದವು – ಈ ಪ್ರಯತ್ನಗಳನ್ನು ವಿಫಲಗೊಳಿಸಲಾಗಿತ್ತು.
ಟೂರ್ನಮೆಂಟ್ ನಲ್ಲಿ ಇಸಿಬಿಯ ನೀತಿ ಸಂಹಿತೆಯ ಪಾಲನೆಗಾಗಿ ಐಸಿಸಿಯನ್ನು ಭ್ರಷ್ಟಾಚಾರ ವಿರೋಧಿ ಅಧಿಕಾರಿ (ಡಿಎಸಿಒ)ಯನ್ನಾಗಿ ನೇಮಕ ಮಾಡಲಾಗಿತ್ತು ಎಂದು ಐಸಿಸಿ ಹೇಳಿದೆ.
ಮೂವರು ಭಾರತೀಯರು ಸೇರಿದಂತೆ ಆರು ಮಂದಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸಲು ಮಂಗಳವಾರದಿಂದ 14 ದಿನಗಳ ಕಾಲಾವಕಾಶ ನೀಡಲಾಗಿದೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…