ಕ್ರೀಡೆ

ಕ್ರಿಕೆಟ್‌ ಶಿಶು ನೆದರ್ಲೆಂಡ್‌ ವಿರುದ್ಧ ಮುಗ್ಗರಿಸಿ ಮನೆ ದಾರಿ ಹಿಡಿದ ದ. ಆಫ್ರಿಕಾ

ಅಡಿಲೇಡ್‌: ನಿರ್ಣಾಯಕ ಪಂದ್ಯಗಳನ್ನು ಸೋತು ಚೋಕರ್ಸ್‌ ಎಂದು ಕರೆಸಿಕೊಳ್ಳುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ಮತ್ತೊಮ್ಮೆ ಇದೇ ಚಾಳಿ ಪ್ರದರ್ಶಿಸಿ ಮನೆಯ ದಾರಿಯ ಹಿಡಿದಿದೆ.

ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಆರಂಭದಲ್ಲಿ ಭರ್ಜರಿ ಪ್ರದರ್ಶನಗಳ ಮೂಲಕ ಈ ಬಾರಿ ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದ ತೆಂಬಾ ಬವೂಮ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಈಗ ಸೂಪರ್‌-12 ಹಂತದಲ್ಲಿ ಕ್ರಿಕೆಟ್‌ ಶಿಶು ನೆದರ್ಲೆಂಡ್‌ ವಿರುದ್ಧ ಸೋತು ಸ್ಪರ್ಧೆಯಿಂದ ಹೊರಬಿದ್ದಿದೆ. ಹರಿಣಗಳು ಹೊರ ಬೀಳುತ್ತಿದ್ದಂತೆಯೇ ಟೀಮ್ ಇಂಡಿಯಾ ‘ಬಿ’ ಗುಂಪಿನ ಅಗ್ರಸ್ಥಾನಿಯಾಗಿ ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟಿದೆ.

ಇಲ್ಲಿನ ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್‌ ಎದುರು ಮುಗ್ಗರಿಸಿದ ದಕ್ಷಿಣ ಆಫ್ರಿಕಾ ತಂಡ 13 ರನ್‌ಗಳ ಸೋಲಿನ ಆಘಾತ ಅನುಭವಿಸತು.ಇದರಿಂದ ಭಾರತ ತಂಡ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆದರೆ, ಇದೇ ಗುಂಪಿನಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳಿಗೆ ಅವಕಾಶದ ಬಾಗಿಲು ತೆಗೆದುಕೊಂಡಿತು. ಬಾಂಗ್ಲಾ ವಿರುದ್ಧಗೆದ್ದ ಪಾಕ್‌ ಈಗ ಗುಂಪಿ ನ ಎರಡನೇ ಸ್ಥಾನಿಯಾಗಿ ಸೆಮಿಫೈನಲ್‌ ಗೆ ಲಗ್ಗೆ ಇಟ್ಟಿದೆ.

“ಎ’ ಗುಂಪಿನಲ್ಲಿ ನ್ಯೂಜಿಲೆಂಡ್‌ ಮತ್ತು ಇಂಗ್ಲೆಂಡ್‌ ತಂಡಗಳು ಸೆಮಿಫೈನಲ್ಸ್‌ಗೆ ಅರ್ಹತೆ ಪಡೆದುಕೊಂಡಿವೆ. ನೆಟ್‌ ರನ್‌ರೇಟ್‌ನಲ್ಲಿ ಹಿನ್ನಡೆ ಕಂಡ 2021ರ ಚಾಂಪಿಯನ್ಸ್‌ ಹಾಗೂ ಆತಿಥೇಯ ಆಸ್ಟ್ರೇಲಿಯಾ ತಂಡ ಕೂಡ ಸ್ಪರ್ಧೆಯಿಂದ ಹೊರಬಿದ್ದಿದೆ. ಈಗ ‘ಎ’ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಇಂಗ್ಲೆಂಡ್‌ ತಂಡ ಸೆಮಿಫೈನಲ್ಸ್‌ನಲ್ಲಿ ಭಾರತ ವಿರುದ್ಧ ಸೆಣಸಲಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು. ಈಗಾಗಲೇ ಟೂರ್ನಿಯಿಂದ ಹೊರ ಬಿದ್ದಿರುವ ನೆದರ್ಲೆಂಡ್ಸ್‌ ತಂಡ ಚಳಿ ಬಿಟ್ಟು ಆಟವಾಡಿತು. ಸ್ಟೀಫನ್‌ ಮೈಬರ್ಗ್‌ (37), ಮ್ಯಾಕ್ಸ್‌ ಒಡೋವ್ಡ್‌ (29), ಟಾಮ್‌ ಕೂಪರ್‌ (31) ಮತ್ತು ಕಾಲಿನ್ ಅಕೆರ್ಮನ್‌ (41*) ಭರ್ಜರಿ ಬ್ಯಾಟಿಂಗ್‌ನಿಂದ ನೆದರ್ಲೆಂಡ್ಸ್‌ 20 ಓವರ್‌ಗಳಲ್ಲಿ 158/4 ರನ್‌ಗಳ ಸವಾಲಿನ ಪೇರಿಸಿತು. ದಕ್ಷಿಣ ಆಫ್ರಿಕಾ ಪರ ಕೇಶವ್‌ ಮಹಾರಾಜ್‌ (27ಕ್ಕೆ 2) ಉತ್ತಮ ದಾಳಿ ಸಂಘಟಿಸಿದರು.

ದಕ್ಷಿಣ ಆಫ್ರಿಕಾ
ಬ್ಯಾಟಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ ನಿತಂತರವಾಗಿ ವಿಕೆಟ್‌ಗಳನ್ನು ಕೈಚೆಲ್ಲುವ ಮೂಲಕ ಒತ್ತಡಕ್ಕೆ ಸಿಲುಕಿ ಜಯದ ದಡ ಮುಟ್ಟಲು ವಿಫಲವಾಯಿತು. ತೆಂಬಾ ಬವೂಮ (20), ರೈಲೀ ರೊಸೋವ್‌ (25) ಮತ್ತು ಎನ್ರಿಚ್‌ ಕ್ಲಾಸೆನ್‌ (21) ಆರಂಭ ಪಡೆದರೂ ದೊಡ್ಡ ಇನಿಂಗ್ಸ್‌ ಆಡದೇ ಇದ್ದ ಕಾರಣ ಜೊತೆಯಾಟ ಕಟ್ಟಲು ವಿಫಲವಾಯಿತು. ಕೊನೆಯಲ್ಲಿ ನಿರ್ಮಿಸಲು 20 ಓವರ್‌ಗಳಲ್ಲಿ 8 ವಿಕೆಟ್‌ಗೆ 145 ರನ್‌ ಗಳಿಸಲಷ್ಟೇ ಶಕ್ತವಾಗಿ ಟೂರ್ನಿಯಿಂದ ಹೊರ ಬಿದ್ದಿತು. ನೆದರ್ಲೆಂಡ್‌ ಪರ ಬ್ರಾಂಡನ್‌ ಗ್ಲೊವರ್‌ (9ಕ್ಕೆ 3) ಮೂರು ವಿಕೆಟ್‌ ಕಿತ್ತು ಹರಿಣ ಪಡೆಗೆ ಮಾರಕವಾದರು.

ಸಂಕ್ಷಿಪ್ತ ಸ್ಕೋರ್‌
ನೆದರ್ಲೆಂಡ್ಸ್‌: 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 158 ರನ್‌ (ಸ್ಟೀಫನ್‌ ಮೈಬರ್ಗ್‌ 37, ಮ್ಯಾಕ್ಸ್‌ ಒಡೋವ್ಡ್‌ 29, ಟಾಮ್‌ ಕೂಪರ್‌ 31, ಕಾಲಿನ್ ಅಕೆರ್ಮನ್‌ 41*; ಕೇಶವ್‌ ಮಹಾರಾಜ್‌ 27ಕ್ಕೆ 2).
ದಕ್ಷಿಣ ಆಫ್ರಿಕಾ: 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 145 ರನ್‌ (ತೆಂಬಾ ಬವೂಮ 20, ರೈಲೀ ರೊಸೋವ್‌ 25, ಎನ್ರಿಚ್‌ ಕ್ಲಾಸೆನ್‌ 21; ಬ್ರಾಂಡನ್‌ ಗ್ಲೊವರ್‌ 9ಕ್ಕೆ 3, ಫ್ರೆಡ್‌ ಕ್ಲಾಸೆನ್‌ 20ಕ್ಕೆ 2, ಬಾಸ್‌ ಡೆ ಲೀಡೆ 25ಕ್ಕೆ 2).
ಪಂದ್ಯಶ್ರೇಷ್ಠ: ಕಾಲಿನ್‌ ಅಕೆರ್ಮನ್‌

andolanait

Recent Posts

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

20 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

4 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

4 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

4 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

4 hours ago