ಕ್ರೀಡೆ

ಕ್ರಿಕೆಟ್‌ ಶಿಶು ನೆದರ್ಲೆಂಡ್‌ ವಿರುದ್ಧ ಮುಗ್ಗರಿಸಿ ಮನೆ ದಾರಿ ಹಿಡಿದ ದ. ಆಫ್ರಿಕಾ

ಅಡಿಲೇಡ್‌: ನಿರ್ಣಾಯಕ ಪಂದ್ಯಗಳನ್ನು ಸೋತು ಚೋಕರ್ಸ್‌ ಎಂದು ಕರೆಸಿಕೊಳ್ಳುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ಮತ್ತೊಮ್ಮೆ ಇದೇ ಚಾಳಿ ಪ್ರದರ್ಶಿಸಿ ಮನೆಯ ದಾರಿಯ ಹಿಡಿದಿದೆ.

ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಆರಂಭದಲ್ಲಿ ಭರ್ಜರಿ ಪ್ರದರ್ಶನಗಳ ಮೂಲಕ ಈ ಬಾರಿ ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದ ತೆಂಬಾ ಬವೂಮ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಈಗ ಸೂಪರ್‌-12 ಹಂತದಲ್ಲಿ ಕ್ರಿಕೆಟ್‌ ಶಿಶು ನೆದರ್ಲೆಂಡ್‌ ವಿರುದ್ಧ ಸೋತು ಸ್ಪರ್ಧೆಯಿಂದ ಹೊರಬಿದ್ದಿದೆ. ಹರಿಣಗಳು ಹೊರ ಬೀಳುತ್ತಿದ್ದಂತೆಯೇ ಟೀಮ್ ಇಂಡಿಯಾ ‘ಬಿ’ ಗುಂಪಿನ ಅಗ್ರಸ್ಥಾನಿಯಾಗಿ ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟಿದೆ.

ಇಲ್ಲಿನ ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್‌ ಎದುರು ಮುಗ್ಗರಿಸಿದ ದಕ್ಷಿಣ ಆಫ್ರಿಕಾ ತಂಡ 13 ರನ್‌ಗಳ ಸೋಲಿನ ಆಘಾತ ಅನುಭವಿಸತು.ಇದರಿಂದ ಭಾರತ ತಂಡ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆದರೆ, ಇದೇ ಗುಂಪಿನಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳಿಗೆ ಅವಕಾಶದ ಬಾಗಿಲು ತೆಗೆದುಕೊಂಡಿತು. ಬಾಂಗ್ಲಾ ವಿರುದ್ಧಗೆದ್ದ ಪಾಕ್‌ ಈಗ ಗುಂಪಿ ನ ಎರಡನೇ ಸ್ಥಾನಿಯಾಗಿ ಸೆಮಿಫೈನಲ್‌ ಗೆ ಲಗ್ಗೆ ಇಟ್ಟಿದೆ.

“ಎ’ ಗುಂಪಿನಲ್ಲಿ ನ್ಯೂಜಿಲೆಂಡ್‌ ಮತ್ತು ಇಂಗ್ಲೆಂಡ್‌ ತಂಡಗಳು ಸೆಮಿಫೈನಲ್ಸ್‌ಗೆ ಅರ್ಹತೆ ಪಡೆದುಕೊಂಡಿವೆ. ನೆಟ್‌ ರನ್‌ರೇಟ್‌ನಲ್ಲಿ ಹಿನ್ನಡೆ ಕಂಡ 2021ರ ಚಾಂಪಿಯನ್ಸ್‌ ಹಾಗೂ ಆತಿಥೇಯ ಆಸ್ಟ್ರೇಲಿಯಾ ತಂಡ ಕೂಡ ಸ್ಪರ್ಧೆಯಿಂದ ಹೊರಬಿದ್ದಿದೆ. ಈಗ ‘ಎ’ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಇಂಗ್ಲೆಂಡ್‌ ತಂಡ ಸೆಮಿಫೈನಲ್ಸ್‌ನಲ್ಲಿ ಭಾರತ ವಿರುದ್ಧ ಸೆಣಸಲಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು. ಈಗಾಗಲೇ ಟೂರ್ನಿಯಿಂದ ಹೊರ ಬಿದ್ದಿರುವ ನೆದರ್ಲೆಂಡ್ಸ್‌ ತಂಡ ಚಳಿ ಬಿಟ್ಟು ಆಟವಾಡಿತು. ಸ್ಟೀಫನ್‌ ಮೈಬರ್ಗ್‌ (37), ಮ್ಯಾಕ್ಸ್‌ ಒಡೋವ್ಡ್‌ (29), ಟಾಮ್‌ ಕೂಪರ್‌ (31) ಮತ್ತು ಕಾಲಿನ್ ಅಕೆರ್ಮನ್‌ (41*) ಭರ್ಜರಿ ಬ್ಯಾಟಿಂಗ್‌ನಿಂದ ನೆದರ್ಲೆಂಡ್ಸ್‌ 20 ಓವರ್‌ಗಳಲ್ಲಿ 158/4 ರನ್‌ಗಳ ಸವಾಲಿನ ಪೇರಿಸಿತು. ದಕ್ಷಿಣ ಆಫ್ರಿಕಾ ಪರ ಕೇಶವ್‌ ಮಹಾರಾಜ್‌ (27ಕ್ಕೆ 2) ಉತ್ತಮ ದಾಳಿ ಸಂಘಟಿಸಿದರು.

ದಕ್ಷಿಣ ಆಫ್ರಿಕಾ
ಬ್ಯಾಟಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ ನಿತಂತರವಾಗಿ ವಿಕೆಟ್‌ಗಳನ್ನು ಕೈಚೆಲ್ಲುವ ಮೂಲಕ ಒತ್ತಡಕ್ಕೆ ಸಿಲುಕಿ ಜಯದ ದಡ ಮುಟ್ಟಲು ವಿಫಲವಾಯಿತು. ತೆಂಬಾ ಬವೂಮ (20), ರೈಲೀ ರೊಸೋವ್‌ (25) ಮತ್ತು ಎನ್ರಿಚ್‌ ಕ್ಲಾಸೆನ್‌ (21) ಆರಂಭ ಪಡೆದರೂ ದೊಡ್ಡ ಇನಿಂಗ್ಸ್‌ ಆಡದೇ ಇದ್ದ ಕಾರಣ ಜೊತೆಯಾಟ ಕಟ್ಟಲು ವಿಫಲವಾಯಿತು. ಕೊನೆಯಲ್ಲಿ ನಿರ್ಮಿಸಲು 20 ಓವರ್‌ಗಳಲ್ಲಿ 8 ವಿಕೆಟ್‌ಗೆ 145 ರನ್‌ ಗಳಿಸಲಷ್ಟೇ ಶಕ್ತವಾಗಿ ಟೂರ್ನಿಯಿಂದ ಹೊರ ಬಿದ್ದಿತು. ನೆದರ್ಲೆಂಡ್‌ ಪರ ಬ್ರಾಂಡನ್‌ ಗ್ಲೊವರ್‌ (9ಕ್ಕೆ 3) ಮೂರು ವಿಕೆಟ್‌ ಕಿತ್ತು ಹರಿಣ ಪಡೆಗೆ ಮಾರಕವಾದರು.

ಸಂಕ್ಷಿಪ್ತ ಸ್ಕೋರ್‌
ನೆದರ್ಲೆಂಡ್ಸ್‌: 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 158 ರನ್‌ (ಸ್ಟೀಫನ್‌ ಮೈಬರ್ಗ್‌ 37, ಮ್ಯಾಕ್ಸ್‌ ಒಡೋವ್ಡ್‌ 29, ಟಾಮ್‌ ಕೂಪರ್‌ 31, ಕಾಲಿನ್ ಅಕೆರ್ಮನ್‌ 41*; ಕೇಶವ್‌ ಮಹಾರಾಜ್‌ 27ಕ್ಕೆ 2).
ದಕ್ಷಿಣ ಆಫ್ರಿಕಾ: 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 145 ರನ್‌ (ತೆಂಬಾ ಬವೂಮ 20, ರೈಲೀ ರೊಸೋವ್‌ 25, ಎನ್ರಿಚ್‌ ಕ್ಲಾಸೆನ್‌ 21; ಬ್ರಾಂಡನ್‌ ಗ್ಲೊವರ್‌ 9ಕ್ಕೆ 3, ಫ್ರೆಡ್‌ ಕ್ಲಾಸೆನ್‌ 20ಕ್ಕೆ 2, ಬಾಸ್‌ ಡೆ ಲೀಡೆ 25ಕ್ಕೆ 2).
ಪಂದ್ಯಶ್ರೇಷ್ಠ: ಕಾಲಿನ್‌ ಅಕೆರ್ಮನ್‌

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

54 mins ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

3 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

3 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

3 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

4 hours ago