ಕ್ರೀಡೆ

T20 worldcup: ಕ್ರಿಕೆಟ್‌ ಸ್ಕಾಟ್ಲೆಂಡ್‌ ತಂಡದ ಜೆರ್ಸಿಯಲ್ಲಿ ರಾರಾಜಿಸಿದ “ನಂದಿನಿ”

ಕರ್ನಾಟಕ ಹಾಲು ಒಕ್ಕೂಟದ ಬ್ರಾಂಡ್‌ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಕ್ರಿಕೆಟ್‌ ಸ್ಕಾಟ್ಲೆಂಡ್‌ ಬುಧವಾರ (ಮೇ.15) ನಡೆದ ವರ್ಚುವಲ್‌ ಜೆಂಟಿ ಪತ್ರಿಕಾಗೋಷ್ಠಿಯಲ್ಲಿ ಅನಾವರಣಗೊಳಿಸಿದೆ.

ಈ ಜೆರ್ಸಿಯನ್ನು ಸ್ಕಾಟ್ಲೆಂಡ್‌ ತಂಡದ ಉಪ ನಾಯಕ ಮ್ಯೂಥ್ಯೂ ಕ್ರಾಸ್‌ ಮತ್ತು ಮಧ್ಯಮ ವೇಗಿ ಕ್ರಿಸ್‌ ಸೋಲ್‌ ಅವರು ಬಿಡುಗಡೆಗೊಳಿಸಿದರು.

ಮತ್ತು ಜೆರ್ಸಿ ಅನಾವಣ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸ್ಕಾಟ್ಲೆಂಡ್‌, ಕ್ರಿಕೆಟ್‌ ಸ್ಕಾಟ್ಲೆಂಡ್‌ ಮತ್ತು ಕರ್ನಾಟಕದ ಹಾವು ಒಕ್ಕೂಟವು ಈ ಬಾರಿಯ icc t20 ವಿಶ್ವಕಪ್‌ನಲ್ಲಿ ನಂದಿನಿ ಬ್ರಾಂಡ್‌ನ್ನು ಪುರುಷರ ತಂಡದ ಅಧಿಕೃತ ಪ್ರಯೋಜಕರಾಗಿ ಘೊಷಿಸಲು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

ಕ್ರಿಕೆಟ್ ಸ್ಕಾಟ್ಲೆಂಡ್ ಮತ್ತು ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಅವರನ್ನು ICC ಪುರುಷರ T20 ವಿಶ್ವಕಪ್ 2024 ನಲ್ಲಿ ಸ್ಕಾಟ್ಲೆಂಡ್ ಪುರುಷರ ತಂಡದ ಅಧಿಕೃತ ಪ್ರಾಯೋಜಕರಾಗಿ ಘೋಷಿಸಲು ಸಂತೋಷವಾಗಿದೆ.

ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌) ತನ್ನ ಬ್ರಾಂಡ್‌ನ್ನು ಪ್ರಪಂಚದಾದ್ಯಂತ ವಿಸ್ತಾರಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಒಂದಾದ ಟಿ20 ವಿಶ್ವಕಪ್‌ ನಲ್ಲಿ ತನ್ನ ಬ್ರಾಂಡ್‌ ಬಗ್ಗೆ ಪ್ರಚಾರ ಮಾಡಲು ಕೆಎಂಎಫ್‌ ಮುಂದಾಗಿತ್ತು. ಈ ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಲಿದೆ ಎಂದು ನಿರ್ದೇಶಕರು ಹೇಳಿದ್ದು, ಅದರಂತೆ ಸ್ಕಾಟ್ಲೆಂಡ್‌ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಇವತ್ತು ಅಥವಾ ನಾಳೆ ಐರ್ಲೆಂಡ್‌ ತಂಡ ಕೂಡಾ ನಂದಿನ ಲೋಗೋವನ್ನು ಲಾಂಚ್‌ ಮಾಡಬಹುದು.

ಇದೇ ಜೂನ್‌ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಎರಡು ತಂಡಗಳಿಗೆ ಕರ್ನಾಟಕದ ಖ್ಯಾತ ಹಾಲು ಉತ್ಪನ್ನ ಒಕ್ಕೂಟವೊಂದು ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಇನ್ನು ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ಇದೇ ಜೂನ್‌ 1ರಿಂದ 29 ವರೆಗೆ ಟಿ20 ವಿಶ್ವಕಪ್‌ ನಡೆಯಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

4 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

4 hours ago