ಕ್ರೀಡೆ

ಕ್ರಿಕೆಟ್‌ ವಿಶ್ವಕಪ್‌ 2023: ಕೇರಳದಲ್ಲೂ ನಡೆಯಲಿದೆ ಏಕದಿನ ವಿಶ್ವಕಪ್ ಪಂದ್ಯಗಳು

ತಿರುವನಂತಪುರಂ: ಈ ಬಾರಿ ಅಕ್ಟೋಬರ್‌-ನವೆಂಬರ್‌ ನಲ್ಲಿ ಭಾರತ ಏಕದಿನ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಬಿಸಿಸಿಐ ಏಕಾಂಗಿಯಾಗಿ ಕೂಟವನ್ನು ಆಯೋಜಿಸುತ್ತಿರುವುದರಿಂದ ಕೂಟ ಅತ್ಯಂತ ಮಹತ್ವ ಪಡೆದು ಕೊಂಡಿದೆ. ಇಂತಹ ಹೊತ್ತಿನಲ್ಲಿ ಕೇರಳದ ಕ್ರಿಕೆಟ್‌ ಅಭಿಮಾನಿಗಳಿಗೆ ಅತ್ಯಂತ ಸಂತೋಷದ ಸುದ್ದಿ ಲಭಿಸಿದೆ.

ತಿರುವನಂತಪುರಂ ಗ್ರೀನ್‌ ಫೀಲ್ಡ್‌ ಮೈದಾನದಲ್ಲಿ ಮೂರು ಪಂದ್ಯಗಳು ನಡೆಯುವುದು ಬಹುತೇಕ ಖಾತ್ರಿಯಾಗಿದೆ. ಹಾಗಂತ ಅವರಿಗೆ ಪೂರ್ಣ ಸಂಭ್ರಮಪಡಲು ಅವಕಾಶವಿಲ್ಲ. ಭಾರತದ ಯಾವುದೇ ಪಂದ್ಯಗಳು ನಡೆಯುವ ಸಾಧ್ಯತೆ ಶೇ.99 ಇಲ್ಲ.

ತಿರುವನಂತಪುರಂ ಮೈದಾನದಲ್ಲಿ ಶ್ರೀಲಂಕಾದ ಒಂದು ಪಂದ್ಯ ನಡೆಯಬಹುದು. ಇನ್ನೆರಡು ಇತರೆ ದೇಶಗಳ ಪಂದ್ಯಗಳು ನಡೆಯಲಿವೆ. ಈ ಬಗ್ಗೆ ಎಲ್ಲವೂ ಅಧಿಕೃತವಾಗಿದ್ದರೂ ಐಸಿಸಿ ವಿಶ್ವಕಪ್‌ನ ವೇಳಾಪಟ್ಟಿಯನ್ನು ಅಧಿಕೃತಗೊಳಿಸಿದ ಮೇಲಷ್ಟೇ ಎಲ್ಲವೂ ಅಂತಿಮಗೊಳ್ಳಲಿದೆ. ಅಂದರೆ ಔಪಚಾರಿಕ ವಿಧಿವಿಧಾನಗಳಷ್ಟೇ ಬಾಕಿಯಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಜಯೇಶ್‌ ಜಾರ್ಜ್‌, ನಾವು ಬಿಸಿಸಿಐಗೆ ಮನವಿ ಮಾಡಿದ್ದೇವೆ. ಕೆಲವು ಪಂದ್ಯಗಳು ನಮಗೆ ಸಿಗುವ ನಂಬಿಕೆಯೂ ಇದೆ. ಆದರೆ ಬಿಸಿಸಿಐನಿಂದ ಇನ್ನೂ ನಮಗೆ ಅಧಿಕೃತವಾಗಿ ಖಾತ್ರಿ ಸಿಕ್ಕಿಲ್ಲ ಎಂದಿದ್ದಾರೆ.

ಕೇರಳದಲ್ಲಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಗಳು ನಡೆಯುವುದು ಅಷ್ಟೇನು ಮಹತ್ವದ ಸಂಗತಿ ಎಂದು ನೀವು ಪ್ರಶ್ನಿಸುತ್ತೀರಾ? ಮಹತ್ವವಿದೆ. ಭಾರತ ಇದುವರೆಗೆ ಮೂರು ಬಾರಿ ವಿಶ್ವಕಪ್‌ ಆತಿಥ್ಯ ವಹಿಸಿದೆ. 1987, 1996 ಮತ್ತು 2011ರಂದು. ಅಷ್ಟೂ ಬಾರಿ ಜಂಟಿ ಆತಿಥ್ಯದಲ್ಲೇ ನಡೆದಿದ್ದು. ಈ ಕಾರಣಕ್ಕೆ ಕೇರಳ ಒಮ್ಮೆಯೂ ವಿಶ್ವಕಪ್‌ ಪಂದ್ಯವನ್ನಾಯೋಜಿಸುವ ಅವಕಾಶ ಸಿಕ್ಕಿಲ್ಲ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago