ಕ್ರೀಡೆ

ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಅಕ್ಷರ್‌ ಪಟೇಲ್

ವಡೋದರಾ (ಗುಜರಾತ್)​: ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್​ ಪಟೇಲ್​ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ ನಡೆದಿದ್ದು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.ಜಯದೇವ್ ಉನದ್ಕತ್ ಸೇರಿದಂತೆ ಹಲವು ಕ್ರಿಕೆಟಿಗರು ಸಮಾರಂಭಕ್ಕೆ ಆಗಮಿಸಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಅನೇಕರು ಮದುವೆಗೆ ಆಗಮಿಸಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ಮತ್ತು 28 ವರ್ಷದ ಮೇಹಾ ಬಹುದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಅಕ್ಷರ್ ಮತ್ತು ಮೇಹಾ ಅವರ ಮದುವೆ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವಜೋಡಿ ಸಂಗೀತೋತ್ಸವದಲ್ಲಿ ಸಖತ್​ ಹೆಜ್ಜೆ ಹಾಕುತ್ತಿರುವುದನ್ನು ನೋಡಬಹುದು. ಸ್ವತಃ ಮೇಹಾ ಪಟೇಲ್ ಅವರೇ ತಮ್ಮ ಟ್ವಿಟರ್‌ ಹ್ಯಾಂಡಲ್​ನಲ್ಲಿ ಮದುವೆಯ ಹಲವು ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಮೇಹಾ ಪಟೇಲ್ ವೃತ್ತಿಯಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ತಜ್ಞೆ. ಸಾಮಾಜಿಕ ಜಾಲತಾಣದಲ್ಲಿ ಆಹಾರ ಯೋಜನೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಕ್ಷರ್ ಮತ್ತು ಮೇಹಾ ಅನೇಕ ಬಾರಿ ಒಟ್ಟಿಗೆ ರಜಾದಿನಗಳನ್ನೂ ಕಳೆದಿದ್ದಾರೆ. ಇತ್ತೀಚೆಗೆ ಅಮೆರಿಕಕ್ಕೆ ಹೋಗಿ ಬಂದಿದ್ದರು.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

7 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

11 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

11 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

12 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

12 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

12 hours ago