ಕ್ರೀಡೆ

ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಅಕ್ಷರ್‌ ಪಟೇಲ್

ವಡೋದರಾ (ಗುಜರಾತ್)​: ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್​ ಪಟೇಲ್​ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ ನಡೆದಿದ್ದು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.ಜಯದೇವ್ ಉನದ್ಕತ್ ಸೇರಿದಂತೆ ಹಲವು ಕ್ರಿಕೆಟಿಗರು ಸಮಾರಂಭಕ್ಕೆ ಆಗಮಿಸಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಅನೇಕರು ಮದುವೆಗೆ ಆಗಮಿಸಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ಮತ್ತು 28 ವರ್ಷದ ಮೇಹಾ ಬಹುದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಅಕ್ಷರ್ ಮತ್ತು ಮೇಹಾ ಅವರ ಮದುವೆ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವಜೋಡಿ ಸಂಗೀತೋತ್ಸವದಲ್ಲಿ ಸಖತ್​ ಹೆಜ್ಜೆ ಹಾಕುತ್ತಿರುವುದನ್ನು ನೋಡಬಹುದು. ಸ್ವತಃ ಮೇಹಾ ಪಟೇಲ್ ಅವರೇ ತಮ್ಮ ಟ್ವಿಟರ್‌ ಹ್ಯಾಂಡಲ್​ನಲ್ಲಿ ಮದುವೆಯ ಹಲವು ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಮೇಹಾ ಪಟೇಲ್ ವೃತ್ತಿಯಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ತಜ್ಞೆ. ಸಾಮಾಜಿಕ ಜಾಲತಾಣದಲ್ಲಿ ಆಹಾರ ಯೋಜನೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಕ್ಷರ್ ಮತ್ತು ಮೇಹಾ ಅನೇಕ ಬಾರಿ ಒಟ್ಟಿಗೆ ರಜಾದಿನಗಳನ್ನೂ ಕಳೆದಿದ್ದಾರೆ. ಇತ್ತೀಚೆಗೆ ಅಮೆರಿಕಕ್ಕೆ ಹೋಗಿ ಬಂದಿದ್ದರು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago