ಕ್ರೀಡೆ

ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಕ್ರಿಕೆಟಿಗ ಅಂಬಾಟಿ ರಾಯುಡು!

ಹೈದರಾಬಾದ್‌: ಟೀಂ ಇಂಡಿಯಾ ಮಾಜಿ ಆಟಗಾರ ಅಂಬಾಟಿ ರಾಯುಡು ಹೊಸ ಇನ್ನಿಂಗ್ಸ್‌ ಆರಂಭಿಸಿದ್ದು, ಆಂಧ್ರಪ್ರದೇಶ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರು ಆಂಧ್ರಪ್ರದೇಶ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ವಿಜಯವಾಡದಲ್ಲಿ ಮುಖ್ಯಮಂತ್ರಿ ವೈ.ಎಸ್‌ ಜಗನ್‌ ರೆಡ್ಡಿ, ಉಪ ಮಖ್ಯಮಂತ್ರಿ ನಾರಾಯಣ ಸ್ವಾಮಿ, ಸಂಸದ ಪೆದ್ದಿ ರೆಡ್ಡಿ, ಮಿಥುನ್‌ ರೆಡ್ಡಿ ಸಮ್ಮುಖದಲ್ಲಿ ವೈಎಸ್‌ಆರ್‌ ಪಕ್ಷಕ್ಕೆ ಸೇರಿದರು.

ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ಭಾರತೀಯ ಖ್ಯಾತ ಕ್ರಿಕೆಟಿಗ ಅಂಬಾಟಿ ತಿರುಪತಿ ರಾಯುಡು ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು ಎಂದು ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಹಲವು ಅಂತರಾಷ್ಟ್ರೀಯ ಪಂದ್ಯಗಳಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸಿರುವ ಅಂಬಾಟಿ ರಾಯುಡು ಆವರು 2023ರಲ್ಲಿ ಚೆನ್ನೈ ಪರವಾಗಿ ಕೊನೆಯ ಐಪಿಎಲ್‌ ಸೀಸನ್‌ ಆಡಿದ್ದರು. ಇದರಲ್ಲಿ ಚೆನ್ನೈ ಐದನೇ ಬಾರಿಗೆ ಕಪ್‌ ಗೆದ್ದಿತ್ತು. ಕಳೆದ ಜೂನ್‌ ನಲ್ಲಿ ರಾಯುಡು ರಾಜಕೀಯಕ್ಕೆ ಬರುವ ಬಗ್ಗೆ ಘೋಷಣೆ ಮಾಡಿದ್ದರು. ಇದೀಗ ಅವರು ಅಧಿಕೃತವಾಗಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವನ್ನು ಸೇರಿಕೊಂಡಿದ್ದಾರೆ.

https://x.com/YSRCParty/status/1740345886125986014?s=20

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago