ಹೈದರಾಬಾದ್: ಟೀಂ ಇಂಡಿಯಾ ಮಾಜಿ ಆಟಗಾರ ಅಂಬಾಟಿ ರಾಯುಡು ಹೊಸ ಇನ್ನಿಂಗ್ಸ್ ಆರಂಭಿಸಿದ್ದು, ಆಂಧ್ರಪ್ರದೇಶ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರು ಆಂಧ್ರಪ್ರದೇಶ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿಜಯವಾಡದಲ್ಲಿ ಮುಖ್ಯಮಂತ್ರಿ ವೈ.ಎಸ್ ಜಗನ್ ರೆಡ್ಡಿ, ಉಪ ಮಖ್ಯಮಂತ್ರಿ ನಾರಾಯಣ ಸ್ವಾಮಿ, ಸಂಸದ ಪೆದ್ದಿ ರೆಡ್ಡಿ, ಮಿಥುನ್ ರೆಡ್ಡಿ ಸಮ್ಮುಖದಲ್ಲಿ ವೈಎಸ್ಆರ್ ಪಕ್ಷಕ್ಕೆ ಸೇರಿದರು.
ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ಭಾರತೀಯ ಖ್ಯಾತ ಕ್ರಿಕೆಟಿಗ ಅಂಬಾಟಿ ತಿರುಪತಿ ರಾಯುಡು ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು ಎಂದು ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.
ಹಲವು ಅಂತರಾಷ್ಟ್ರೀಯ ಪಂದ್ಯಗಳಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸಿರುವ ಅಂಬಾಟಿ ರಾಯುಡು ಆವರು 2023ರಲ್ಲಿ ಚೆನ್ನೈ ಪರವಾಗಿ ಕೊನೆಯ ಐಪಿಎಲ್ ಸೀಸನ್ ಆಡಿದ್ದರು. ಇದರಲ್ಲಿ ಚೆನ್ನೈ ಐದನೇ ಬಾರಿಗೆ ಕಪ್ ಗೆದ್ದಿತ್ತು. ಕಳೆದ ಜೂನ್ ನಲ್ಲಿ ರಾಯುಡು ರಾಜಕೀಯಕ್ಕೆ ಬರುವ ಬಗ್ಗೆ ಘೋಷಣೆ ಮಾಡಿದ್ದರು. ಇದೀಗ ಅವರು ಅಧಿಕೃತವಾಗಿ ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…