ನವದೆಹಲಿ: ಇಂದು ದೇಶಾದ್ಯಂತ 6ನೇ ಹಂತದ ಮತದಾನ ನಡೆಯುತ್ತಿದೆ. 8 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬಿರುಸಿನ ಮತದಾನ ಆರಂಭಗೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದ್ದು, ದೆಹಲಿಯ ಎಲ್ಲಾ 7 ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ.
ಪೂರ್ವ ದೆಹಲಿ ಎಂಪಿ, ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಇಂದು ಬೆಳಿಗ್ಗೆಯೇ ಮತದಾನ ಮಾಡಿದರು.
ಇನ್ನು ಮತದಾನದ ಬಗ್ಗೆ ಮಾತನಾಡಿರುವ ಪಿಎಂ ನರೇಂದ್ರ ಮೋದಿ ಅವರು, 2024ರ ಲೋಕಸಭೆ ಚುನಾವಣೆಯ 6ನೇ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ನಾನು ವಿನಂತಿಸುತ್ತೇನೆ. ಪ್ರತಿ ಮತವೂ ಎಣಿಕೆಯಾಗುತ್ತದೆ, ನಿಮ್ಮನ್ನೂ ಎಣಿಕೆ ಮಾಡಿ! ಅದರ ಜನರು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಮತ್ತು ಸಕ್ರಿಯವಾಗಿದ್ದಾಗ ಪ್ರಜಾಪ್ರಭುತ್ವವು ಅಭಿವೃದ್ಧಿ ಹೊಂದುತ್ತದೆ. ಮಹಿಳಾ ಮತದಾರರು ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿಶೇಷವಾಗಿ ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿ ಮತದಾನ ಮಾಡಲು ಪ್ರೇರೇಪಿಸಿದ್ದಾರೆ.
58 ಕ್ಷೇತ್ರಗಳ ಪೈಕಿ ಬಿಹಾರದ 8, ಹರ್ಯಾಣದ ಎಲ್ಲಾ 10 ಕ್ಷೇತ್ರಗಳು, ಜಮ್ಮು ಕಾಶ್ಮೀರಾದ 1, ಜಾರ್ಖಂಡ್ 4, ದೆಹಲಿಯ ಎಲ್ಲಾ 7 ಕ್ಷೇತ್ರಗಳು, ಒಡಿಶಾದ 6, ಉತ್ತರ ಪ್ರದೇಶದ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಈ ಅಖಾಡದಲ್ಲಿ ಒಟ್ಟು 889 ಅಭ್ಯರ್ಥಿಗಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…