ನವದೆಹಲಿ: ಇಂದು ದೇಶಾದ್ಯಂತ 6ನೇ ಹಂತದ ಮತದಾನ ನಡೆಯುತ್ತಿದೆ. 8 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬಿರುಸಿನ ಮತದಾನ ಆರಂಭಗೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದ್ದು, ದೆಹಲಿಯ ಎಲ್ಲಾ 7 ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ.
ಪೂರ್ವ ದೆಹಲಿ ಎಂಪಿ, ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಇಂದು ಬೆಳಿಗ್ಗೆಯೇ ಮತದಾನ ಮಾಡಿದರು.
ಇನ್ನು ಮತದಾನದ ಬಗ್ಗೆ ಮಾತನಾಡಿರುವ ಪಿಎಂ ನರೇಂದ್ರ ಮೋದಿ ಅವರು, 2024ರ ಲೋಕಸಭೆ ಚುನಾವಣೆಯ 6ನೇ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ನಾನು ವಿನಂತಿಸುತ್ತೇನೆ. ಪ್ರತಿ ಮತವೂ ಎಣಿಕೆಯಾಗುತ್ತದೆ, ನಿಮ್ಮನ್ನೂ ಎಣಿಕೆ ಮಾಡಿ! ಅದರ ಜನರು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಮತ್ತು ಸಕ್ರಿಯವಾಗಿದ್ದಾಗ ಪ್ರಜಾಪ್ರಭುತ್ವವು ಅಭಿವೃದ್ಧಿ ಹೊಂದುತ್ತದೆ. ಮಹಿಳಾ ಮತದಾರರು ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿಶೇಷವಾಗಿ ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿ ಮತದಾನ ಮಾಡಲು ಪ್ರೇರೇಪಿಸಿದ್ದಾರೆ.
58 ಕ್ಷೇತ್ರಗಳ ಪೈಕಿ ಬಿಹಾರದ 8, ಹರ್ಯಾಣದ ಎಲ್ಲಾ 10 ಕ್ಷೇತ್ರಗಳು, ಜಮ್ಮು ಕಾಶ್ಮೀರಾದ 1, ಜಾರ್ಖಂಡ್ 4, ದೆಹಲಿಯ ಎಲ್ಲಾ 7 ಕ್ಷೇತ್ರಗಳು, ಒಡಿಶಾದ 6, ಉತ್ತರ ಪ್ರದೇಶದ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಈ ಅಖಾಡದಲ್ಲಿ ಒಟ್ಟು 889 ಅಭ್ಯರ್ಥಿಗಳಿದ್ದಾರೆ.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…