ಕ್ರೀಡೆ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

ಮಂಗಳೂರು: ಗಾಯದ ಸಮಸ್ಯೆಯಿಂದ ಕಳೆದೆರಡು ತಿಂಗಳಿನಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ, ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದೇ ವೇಳೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರಹೆಗ್ಗಡೆ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದು ಕೆಲವು ಸಮಯಗಳ ಕಾಲ ಸಮಾಲೋಚನೆ ನಡೆಸಿದ್ದಾರೆ.

ಬೆಳ್ಳಿ ನಾಣ್ಯ ಉಡುಗೊರೆ: ಟೀಮ್ ಇಂಡಿಯಾದ ಅನುಭವಿ ಆಟಗಾರ ಕೆ.ಎಲ್.ರಾಹುಲ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳು ಕಂಚಿನ ಗೋವಿನ ಪ್ರತಿಮೆಯನ್ನು ನೀಡಿದ್ದಲ್ಲದೆ, ಒಂದು ಬೆಳ್ಳಿ ನಾಣ್ಯ ನೀಡುವ ಮೂಲಕ ಗಾಯದ ಸಮಸ್ಯೆಯಿಂದ ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

ಐಪಿಎಲ್ ವೇಳೆ ಗಾಯ: ಆಸ್ಟ್ರೇಲಿಯಾ ವಿರುದ್ಧ ನಡೆದ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರುವ ಮೂಲಕ ಮಾಜಿ ಕ್ರಿಕೆಟಿಗರ ಟೀಕೆಗೆ ಗುರಿಯಾಗಿದ್ದ ಕೆ.ಎಲ್.ರಾಹುಲ್, ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಡಬ್ಲ್ಯುಟಿಸಿ ಫೈನಲ್ ಪಂದ್ಯಕ್ಕೆ ಭರ್ಜರಿಯಾಗಿ ಎಂಟ್ರಿ ಕೊಡಬೇಕೆಂದು ಚಿಂತಿಸಿದ್ದರಾದರೂ, ಮೇ 1 ರಂದು ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ ಪಂದ್ಯದ ವೇಳೆ ಫೀಲ್ಡಿಂಗ್ ವೇಳೆ ಸ್ನಾಯು ಸೆಳೆತಕ್ಕೆ ಗುರಿಯಾಗಿ ನಂತರ ಇಡೀ ಟೂರ್ನಿಯಿಂದ ಹೊರಗುಳಿದಿದ್ದರು.

ಎನ್‍ಸಿಎಯಲ್ಲಿ ಚಿಕಿತ್ಸೆ: ಬೆಂಗಳೂರಿನ ಎನ್‍ಸಿಎಯಲ್ಲಿ ಕೆ.ಎಲ್.ರಾಹುಲ್ ಚಿಕಿತ್ಸೆ ಪಡೆಯುತ್ತಿದ್ದು, ಶಿಬಿರದಲ್ಲಿ ತಾವು ಪಾಲ್ಗೊಂಡಿರುವ ಫೋಟೋಗಳನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಕಳೆದೆರಡು ತಿಂಗಳಿನಿಂದ ಕ್ರಿಕೆಟ್ ಜೀವನದದಿಂದ ದೂರ ಉಳಿದಿರುವ ಟೀಮ್ ಇಂಡಿಯಾದ ಮಾಜಿ ಉಪನಾಯಕ ಕೆ.ಎಲ್.ರಾಹುಲ್, ಏಷ್ಯಾ ಕಪ್ ಟೂರ್ನಿಯ ಟೀಮ್ ಇಂಡಿಯಾ ಪರ ಬ್ಯಾಟ್ ಬೀಸಲು ಎದುರು ನೋಡುತ್ತಿದ್ದಾರೆ.

andolanait

Recent Posts

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

15 mins ago

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

1 hour ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

1 hour ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

3 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago