ಕ್ರೀಡೆ

ಬೆಂಗಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ಕ್ರಿಕೆಟರ್‌ ರಚಿನ್‌ರವೀಂದ್ರ

ಅಹಮದಾಬಾದ್ : ಏಕದಿನ ವಿಶ್ವಕಪ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ ನಿನ್ನೆಯಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ರಚಿನ್‌ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿವೆ. ಇದೀಗ ರಚಿನ್‌ ರವೀಂದ್ರ ಅವರೊಂದಿಗೆ ಕನ್ನಡದಲ್ಲಿ ಮಾಡಿರುವ ಸಂದರ್ಶನದ ವೀಡಿಯೋ ತುಣುಕು ಸದ್ದು ಮಾಡುತ್ತಿದೆ.

ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ ಬಳಿಕ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಚಿನ್‌ ನಿರೂಪಕರು ಕನ್ನಡದಲ್ಲೇ ಕೇಳುವ ಪ್ರಶ್ನೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲೇ ಉತ್ತರ ಕೊಟ್ಟಿದ್ದಾರೆ. ಈ ಮೂಲಕ ಕನ್ನಡ ಭಾಷೆ ಮೇಲಿನ ಪ್ರೀತಿಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭೇಷ್‌ ಎಂದಿದ್ದಾರೆ.

ನಿರೂಪಕರು ಮೊದಲು ನಿಮ್ಗೆ ರಿಪ್ಲೇ ಮಾಡೋದಕ್ಕೆ ಕಷ್ಟ ಆಗುತ್ತೆ ಅಂತಾ ನಾವು ಕನ್ನಡದಲ್ಲಿ ಪ್ರಶ್ನೆ ಕೇಳುತ್ತೇವೆ ನಡೆಯುತ್ತಲ್ಲಾ? ಎನ್ನುತ್ತಿದ್ದಂತೆ ಹೋ, ತುಂಬಾ ಸಂತೋಷ ಎಂದು ಹೇಳಿದ ರಚಿನ್‌, ಬಳಿಕ ಕನ್ನಡದಲ್ಲಿ ಕೇಳಿದ ಪ್ರತಿಯೊಂದು ಪ್ರಶ್ನೆಯನ್ನು ಸುಲಭವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟಿದ್ದಾರೆ.

ಕನ್ನಡದಲ್ಲಿ ಕೇಳುವ ನಿರೂಪಕರ ಪ್ರಶ್ನೆಗಳಿಗೆ ಸಂತೋಷದಿಂದಲೇ ಉತ್ತರಿಸಿದ ರಚಿನ್‌, ಶತಕ ಸಿಡಿಸುವುದು ಒಬ್ಬ ಕ್ರಿಕೆಟ್ ಆಟಗಾರನಿಗೆ ತುಂಬಾ ವಿಶಿಷ್ಟವಾಗಿರುತ್ತದೆ. ಆದರೆ ಭಾರತದ ಮೈದಾನದಲ್ಲಿ ಇಂತಹ ದೊಡ್ಡ ಇನಿಂಗ್ಸ್ ಆಡಿರುವುದು ನಿಜಕ್ಕೂ ಖುಷಿಯಾಗಿದೆ. ಇಂತಹ ದೊಡ್ಡ ಮೈದಾನದಲ್ಲಿ ಆಡುವುದು ನಿಜಕ್ಕೂ ಮರೆಯಲಾಗದ ಕ್ಷಣವಾಗಿದೆ. ಇದು ಮೊದಲ ಪಂದ್ಯವಾದ್ದರಿಂದ ಆಶಾದಾಯಕವಾಗಿಯೇ ಮುಂದುವರಿಯಬಹುದು ಎಂದು ಹೇಳಿದ್ದಾರೆ.

ಈ ಸೋಲಿನಿಂದ ಇಂಗ್ಲೆಂಡ್‌ ತಂಡವನ್ನು ಟೂರ್ನಿಯಿಂದ ಸೋಲಿಸಬಹುದು ಎಂದು ನಾನು ಹೇಳುವುದಿಲ್ಲ. ಇಂಗ್ಲೆಂಡ್‌ ಕೂಡ ಒಂದು ಅದ್ಭುತ ಕ್ರಿಕೆಟ್‌ ತಂಡ. ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಇನ್ನೂ ಮುಂದೆ ಸಾಗುತ್ತಾರೆ ಅಂತ ನನಗನ್ನಿಸುತ್ತದೆ. ಕೆಲವೊಮ್ಮೆ ದಿನ ನಿಮ್ಮದಾಗಿರುತ್ತದೆ, ಕೆಲವೊಮ್ಮೆ ಆಗಿರೋದಿಲ್ಲ ಅಷ್ಟೇ. ಆದ್ರೆ ಖಂಡಿತವಾಗಿಯೂ ಇಂಗ್ಲೆಂಡ್‌ ಚಾಂಪಿಯನ್‌ ಟೀಂ ಎಂದು ನಂಬುತ್ತೇನೆ ಎಂದು ಶ್ಲಾಘಿಸಿದ್ದಾರೆ.

ಹಿಂದಿರುಗುತ್ತಿರುವುದು ಸಂತೋಷ ಕೊಡುತ್ತಿದೆ. ಬೆಂಗಳೂರಿನಲ್ಲಿ ನನ್ನ ಕುಟುಂಬದೊಂದಿಗಿನ ನೆನಪುಗಳಿವೆ. ನನ್ನ ಅಜ್ಜ ಮತ್ತು ಅಜ್ಜಿಯನ್ನು ವಿಲ್ಸನ್‌ ಗಾರ್ಡನ್‌ನಲ್ಲಿ ನೋಡಿದ ನೆನಪು ಈಗಲೂ ನೆನಪಾಗುತ್ತೆ. ನನ್ನ ತಾಯಿ ಸಂಬಂಧಿಕರು ಇಸ್ರೋ ಬಡಾವಣೆಯಲ್ಲಿದ್ದಾರೆ. ನನಗೆ ಸಾಧ್ಯವಾದಾಗಲೆಲ್ಲಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಅದು ನನಗೆ ತುಂಬಾ ಸಂತೋಷ ನೀಡುತ್ತದೆ. ಮುಂದೆ ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡುವಾಗಲು ಅಭಿಮಾನಿಗಳಿಂದ ಸಾಕಷ್ಟು ಬೆಂಬಲ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಅಲ್ಲದೇ ನಮ್ಮದು ದೊಡ್ಡ ಪರಿವಾರ, ನನ್ನ ಇಡೀ ಕುಟುಂಬಕ್ಕೆ ಎಷ್ಟು ಟಿಕೆಟ್‌ಗಳನ್ನು ಪಡೆಯಲು ಸಾಧ್ಯವಾಗುತ್ತದೆ, ಅಷ್ಟು ಪಡೆಯಲು ನಾನು ಪ್ರಯತ್ನಿಸುತ್ತೇನೆ. ಆದರೆ ಕುಟುಂಬದಿಂದ ಎಷ್ಟು ಜನ ಬರುತ್ತಾರೆ ಅನ್ನೋದು ಖಚಿತವಿಲ್ಲ. ಒಟ್ಟಿನಲ್ಲಿ ಅವರೆಲ್ಲರಿಗೂ ನಾನು ಕೃತಜ್ಞನನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

 

lokesh

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

9 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

10 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago