ಕ್ರೀಡೆ

ಬೆಂಗಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ಕ್ರಿಕೆಟರ್‌ ರಚಿನ್‌ರವೀಂದ್ರ

ಅಹಮದಾಬಾದ್ : ಏಕದಿನ ವಿಶ್ವಕಪ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ ನಿನ್ನೆಯಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ರಚಿನ್‌ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿವೆ. ಇದೀಗ ರಚಿನ್‌ ರವೀಂದ್ರ ಅವರೊಂದಿಗೆ ಕನ್ನಡದಲ್ಲಿ ಮಾಡಿರುವ ಸಂದರ್ಶನದ ವೀಡಿಯೋ ತುಣುಕು ಸದ್ದು ಮಾಡುತ್ತಿದೆ.

ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸಿದ ಬಳಿಕ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಚಿನ್‌ ನಿರೂಪಕರು ಕನ್ನಡದಲ್ಲೇ ಕೇಳುವ ಪ್ರಶ್ನೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲೇ ಉತ್ತರ ಕೊಟ್ಟಿದ್ದಾರೆ. ಈ ಮೂಲಕ ಕನ್ನಡ ಭಾಷೆ ಮೇಲಿನ ಪ್ರೀತಿಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭೇಷ್‌ ಎಂದಿದ್ದಾರೆ.

ನಿರೂಪಕರು ಮೊದಲು ನಿಮ್ಗೆ ರಿಪ್ಲೇ ಮಾಡೋದಕ್ಕೆ ಕಷ್ಟ ಆಗುತ್ತೆ ಅಂತಾ ನಾವು ಕನ್ನಡದಲ್ಲಿ ಪ್ರಶ್ನೆ ಕೇಳುತ್ತೇವೆ ನಡೆಯುತ್ತಲ್ಲಾ? ಎನ್ನುತ್ತಿದ್ದಂತೆ ಹೋ, ತುಂಬಾ ಸಂತೋಷ ಎಂದು ಹೇಳಿದ ರಚಿನ್‌, ಬಳಿಕ ಕನ್ನಡದಲ್ಲಿ ಕೇಳಿದ ಪ್ರತಿಯೊಂದು ಪ್ರಶ್ನೆಯನ್ನು ಸುಲಭವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟಿದ್ದಾರೆ.

ಕನ್ನಡದಲ್ಲಿ ಕೇಳುವ ನಿರೂಪಕರ ಪ್ರಶ್ನೆಗಳಿಗೆ ಸಂತೋಷದಿಂದಲೇ ಉತ್ತರಿಸಿದ ರಚಿನ್‌, ಶತಕ ಸಿಡಿಸುವುದು ಒಬ್ಬ ಕ್ರಿಕೆಟ್ ಆಟಗಾರನಿಗೆ ತುಂಬಾ ವಿಶಿಷ್ಟವಾಗಿರುತ್ತದೆ. ಆದರೆ ಭಾರತದ ಮೈದಾನದಲ್ಲಿ ಇಂತಹ ದೊಡ್ಡ ಇನಿಂಗ್ಸ್ ಆಡಿರುವುದು ನಿಜಕ್ಕೂ ಖುಷಿಯಾಗಿದೆ. ಇಂತಹ ದೊಡ್ಡ ಮೈದಾನದಲ್ಲಿ ಆಡುವುದು ನಿಜಕ್ಕೂ ಮರೆಯಲಾಗದ ಕ್ಷಣವಾಗಿದೆ. ಇದು ಮೊದಲ ಪಂದ್ಯವಾದ್ದರಿಂದ ಆಶಾದಾಯಕವಾಗಿಯೇ ಮುಂದುವರಿಯಬಹುದು ಎಂದು ಹೇಳಿದ್ದಾರೆ.

ಈ ಸೋಲಿನಿಂದ ಇಂಗ್ಲೆಂಡ್‌ ತಂಡವನ್ನು ಟೂರ್ನಿಯಿಂದ ಸೋಲಿಸಬಹುದು ಎಂದು ನಾನು ಹೇಳುವುದಿಲ್ಲ. ಇಂಗ್ಲೆಂಡ್‌ ಕೂಡ ಒಂದು ಅದ್ಭುತ ಕ್ರಿಕೆಟ್‌ ತಂಡ. ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಇನ್ನೂ ಮುಂದೆ ಸಾಗುತ್ತಾರೆ ಅಂತ ನನಗನ್ನಿಸುತ್ತದೆ. ಕೆಲವೊಮ್ಮೆ ದಿನ ನಿಮ್ಮದಾಗಿರುತ್ತದೆ, ಕೆಲವೊಮ್ಮೆ ಆಗಿರೋದಿಲ್ಲ ಅಷ್ಟೇ. ಆದ್ರೆ ಖಂಡಿತವಾಗಿಯೂ ಇಂಗ್ಲೆಂಡ್‌ ಚಾಂಪಿಯನ್‌ ಟೀಂ ಎಂದು ನಂಬುತ್ತೇನೆ ಎಂದು ಶ್ಲಾಘಿಸಿದ್ದಾರೆ.

ಹಿಂದಿರುಗುತ್ತಿರುವುದು ಸಂತೋಷ ಕೊಡುತ್ತಿದೆ. ಬೆಂಗಳೂರಿನಲ್ಲಿ ನನ್ನ ಕುಟುಂಬದೊಂದಿಗಿನ ನೆನಪುಗಳಿವೆ. ನನ್ನ ಅಜ್ಜ ಮತ್ತು ಅಜ್ಜಿಯನ್ನು ವಿಲ್ಸನ್‌ ಗಾರ್ಡನ್‌ನಲ್ಲಿ ನೋಡಿದ ನೆನಪು ಈಗಲೂ ನೆನಪಾಗುತ್ತೆ. ನನ್ನ ತಾಯಿ ಸಂಬಂಧಿಕರು ಇಸ್ರೋ ಬಡಾವಣೆಯಲ್ಲಿದ್ದಾರೆ. ನನಗೆ ಸಾಧ್ಯವಾದಾಗಲೆಲ್ಲಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಅದು ನನಗೆ ತುಂಬಾ ಸಂತೋಷ ನೀಡುತ್ತದೆ. ಮುಂದೆ ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡುವಾಗಲು ಅಭಿಮಾನಿಗಳಿಂದ ಸಾಕಷ್ಟು ಬೆಂಬಲ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಅಲ್ಲದೇ ನಮ್ಮದು ದೊಡ್ಡ ಪರಿವಾರ, ನನ್ನ ಇಡೀ ಕುಟುಂಬಕ್ಕೆ ಎಷ್ಟು ಟಿಕೆಟ್‌ಗಳನ್ನು ಪಡೆಯಲು ಸಾಧ್ಯವಾಗುತ್ತದೆ, ಅಷ್ಟು ಪಡೆಯಲು ನಾನು ಪ್ರಯತ್ನಿಸುತ್ತೇನೆ. ಆದರೆ ಕುಟುಂಬದಿಂದ ಎಷ್ಟು ಜನ ಬರುತ್ತಾರೆ ಅನ್ನೋದು ಖಚಿತವಿಲ್ಲ. ಒಟ್ಟಿನಲ್ಲಿ ಅವರೆಲ್ಲರಿಗೂ ನಾನು ಕೃತಜ್ಞನನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

 

lokesh

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago