ಕ್ರೀಡೆ

ಕಾಶ್ಮೀರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್‌ ಸರ್ಫರಾಝ್ ಖಾನ್!

ಬೆಂಗಳೂರು: ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟಾರ್ ಬ್ಯಾಟರ್‌ ಸರ್ಫರಾಝ್‌ ಖಾನ್, ತಮ್ಮ ವೈವಾಹಿಕ ಜೀವನದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ಜಮ್ಮು – ಕಾಶ್ಮೀರದ ಶೊಪಿಯಾನ್‌ ಜಿಲ್ಲೆಯಲ್ಲಿ ಭಾನುವಾರ (ಆಗಸ್ಟ್ 7) ನಡೆದ ಖಾಸಗಿ ಸಮಾರಂಭದಲ್ಲಿ ಕಣಿವೆ ರಾಜ್ಯದ ಸುಂದರಿಯನ್ನು ತಮ್ಮ ಬಾಳ ಸಂಗಾತಿಯನ್ನಾಗಿ ಸ್ವೀಕರಿಸಿದ್ದಾರೆ. ತಮ್ಮ ವಿವಾಹದ ಸುದ್ದಿಯನ್ನು ಸರ್ಫರಾಝ್‌ ಖಾನ್‌ ಸೋಷಿಯಲ್ ಮೀಡಿಯಾಗಳ ಮೂಲಕ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ.

ವಿವಾಹದ ಬಳಿಕ ಸ್ಥಳೀಯ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಸರ್ಫರಾಝ್‌ ಖಾನ್‌, ತಮ್ಮ ವಿವಾಹ ಇದೇ ರೀತಿ ಆಗಬೇಕೆಂಬುದು ವಿಧಿ ಲಿಖಿತವಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ತಂಡದ ಪರ ಆಡುವ ಆಶಾಭಾವವನ್ನೂ ಇದೇ ವೇಳೆ ಹೊರಹಾಕಿದ್ದಾರೆ.

25 ವರ್ಷದ ಬಲಗೈ ಬ್ಯಾಟರ್‌ ಹಾಗೂ ವಿಕೆಟ್‌ಕೀಪರ್‌, ದೇಶಿ ಕ್ರಿಕೆಟ್‌ನಲ್ಲಿ ಈವರೆಗೆ ಆಡಿರುವ 39 ಪ್ರಥಮದೆರ್ಜೆ ಪಂದ್ಯಗಳಲ್ಲಿ ಒಟ್ಟಾರೆ 3559 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ 13 ಶತಕಗಳು ಸೇರಿವೆ. 301* ರನ್‌ ಅವರ ವೈಯಕ್ತಿಕ ಗರಿಷ್ಠ ಸ್ಕೋರ್‌ ಆಗಿದೆ. ರಣಜಿ ಟ್ರೋಫಿ ಕ್ರಿಕೆಟ್‌ನ ಕಳೆದ 4 ಆವೃತ್ತಿಗಳಲ್ಲಿ ಸರ್ಫರಾಝ್‌ ಖಾನ್‌, 74.14ರ ಸರಾಸರಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿದ ಬ್ಯಾಟರ್‌ ಆಗಿದ್ದಾರೆ.

ಲಿಸ್ಟ್‌ ‘ಎ’ ಕ್ರಿಕೆಟ್‌ನಲ್ಲೂ ಆಡಿದ 31 ಪಂದ್ಯಗಳಲ್ಲಿ 2 ಶತಕಗಳೊಂದಿಗೆ 538 ರನ್‌ ಬಾರಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ಪಳಗಿರುವ ಸರ್ಫರಾಝ್‌, 88 ಪಂದ್ಯಗಳಿಂದ 1124 ರನ್‌ ಗಳಿಸಿದ್ದಾರೆ. ಇದರಲ್ಲಿ 128.89ರ ಸ್ಟ್ರೈಕ್‌ರೇಟ್‌ ಕಾಯ್ದುಕೊಂಡಿದ್ದು, 3 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿಲ್ಲ
ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಕಳೆದ 4 ಆವೃತ್ತಿಗಳಲ್ಲಿ ಗರಿಷ್ಠ ಸ್ಕೋರ್‌ ಮಾಡಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಸರ್ಫರಾಝ್‌ ಖಾನ್‌ಗೆ ಭಾರತ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು ಅಭಿಪ್ರಾಯ ಪಟ್ಟಿದ್ದರು. ಆದರೆ, ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ಈ ಬಗ್ಗೆ ಕಿವಿಕೊಟ್ಟಿಲ್ಲ. ರನ್‌ ಗಳಿಸಿದರಷ್ಟೇ ಸಾಲದು, ಸರ್ಫರಾಝ್ ಖಾನ್ ತಮ್ಮ ತೂಕ ಇಳಿಸಿಕೊಂಡು ಫಿಟ್ನೆಸ್‌ ಕಡೆಗೂ ಗಮನ ನೀಡಬೇಕು ಎಂಬುದು ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ವಾದವಾಗಿದೆ.

2023-24ರ ಸಾಲಿನ ದೇಶಿ ಕ್ರಿಕೆಟ್‌ ಚಟುವಟಿಕೆಗಳು ಮತ್ತೆ ಶುರುವಾಗಲಿದ್ದು, ಈ ಬಾರಿಯೂ ತಮ್ಮ ಆರ್ಭಟ ಮುಂದುವರಿಸಿ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಕಡೆಗೆ ಸರ್ಫರಾಝ್‌ ಖಾನ್‌ ಗಮನ ನೀಡಿದ್ದಾರೆ. ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಸರ್ಫರಾಝ್‌ಗೆ ಶೀಘಘ್ರವೇ ಟೀಮ್ ಇಂಡಿಯಾದ ಕದ ಕೂಡ ತೆರೆದರೆ ಅಚ್ಚರಿಯೇನಿಲ್ಲ. ಆದರೆ, ಭಾರತ ತಂಡದಲ್ಲಿ ಸ್ಥಾನ ಪಡೆಯಲು ಈಗ ಯುವ ಆಟಗಾರರ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಒಬ್ಬರನ್ನು ಒಬ್ಬರು ಮೀರಿಸುವಂತಹ ಆಟಗಾರರು ಇಂದು ಬೆಳಕಿಗೆ ಬರುತ್ತಿದ್ದಾರೆ

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

3 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

4 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

4 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

4 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

4 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

4 hours ago