ಕ್ರೀಡೆ

ಕಾಶ್ಮೀರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್‌ ಸರ್ಫರಾಝ್ ಖಾನ್!

ಬೆಂಗಳೂರು: ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟಾರ್ ಬ್ಯಾಟರ್‌ ಸರ್ಫರಾಝ್‌ ಖಾನ್, ತಮ್ಮ ವೈವಾಹಿಕ ಜೀವನದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ಜಮ್ಮು – ಕಾಶ್ಮೀರದ ಶೊಪಿಯಾನ್‌ ಜಿಲ್ಲೆಯಲ್ಲಿ ಭಾನುವಾರ (ಆಗಸ್ಟ್ 7) ನಡೆದ ಖಾಸಗಿ ಸಮಾರಂಭದಲ್ಲಿ ಕಣಿವೆ ರಾಜ್ಯದ ಸುಂದರಿಯನ್ನು ತಮ್ಮ ಬಾಳ ಸಂಗಾತಿಯನ್ನಾಗಿ ಸ್ವೀಕರಿಸಿದ್ದಾರೆ. ತಮ್ಮ ವಿವಾಹದ ಸುದ್ದಿಯನ್ನು ಸರ್ಫರಾಝ್‌ ಖಾನ್‌ ಸೋಷಿಯಲ್ ಮೀಡಿಯಾಗಳ ಮೂಲಕ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ.

ವಿವಾಹದ ಬಳಿಕ ಸ್ಥಳೀಯ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಸರ್ಫರಾಝ್‌ ಖಾನ್‌, ತಮ್ಮ ವಿವಾಹ ಇದೇ ರೀತಿ ಆಗಬೇಕೆಂಬುದು ವಿಧಿ ಲಿಖಿತವಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ತಂಡದ ಪರ ಆಡುವ ಆಶಾಭಾವವನ್ನೂ ಇದೇ ವೇಳೆ ಹೊರಹಾಕಿದ್ದಾರೆ.

25 ವರ್ಷದ ಬಲಗೈ ಬ್ಯಾಟರ್‌ ಹಾಗೂ ವಿಕೆಟ್‌ಕೀಪರ್‌, ದೇಶಿ ಕ್ರಿಕೆಟ್‌ನಲ್ಲಿ ಈವರೆಗೆ ಆಡಿರುವ 39 ಪ್ರಥಮದೆರ್ಜೆ ಪಂದ್ಯಗಳಲ್ಲಿ ಒಟ್ಟಾರೆ 3559 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ 13 ಶತಕಗಳು ಸೇರಿವೆ. 301* ರನ್‌ ಅವರ ವೈಯಕ್ತಿಕ ಗರಿಷ್ಠ ಸ್ಕೋರ್‌ ಆಗಿದೆ. ರಣಜಿ ಟ್ರೋಫಿ ಕ್ರಿಕೆಟ್‌ನ ಕಳೆದ 4 ಆವೃತ್ತಿಗಳಲ್ಲಿ ಸರ್ಫರಾಝ್‌ ಖಾನ್‌, 74.14ರ ಸರಾಸರಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿದ ಬ್ಯಾಟರ್‌ ಆಗಿದ್ದಾರೆ.

ಲಿಸ್ಟ್‌ ‘ಎ’ ಕ್ರಿಕೆಟ್‌ನಲ್ಲೂ ಆಡಿದ 31 ಪಂದ್ಯಗಳಲ್ಲಿ 2 ಶತಕಗಳೊಂದಿಗೆ 538 ರನ್‌ ಬಾರಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ಪಳಗಿರುವ ಸರ್ಫರಾಝ್‌, 88 ಪಂದ್ಯಗಳಿಂದ 1124 ರನ್‌ ಗಳಿಸಿದ್ದಾರೆ. ಇದರಲ್ಲಿ 128.89ರ ಸ್ಟ್ರೈಕ್‌ರೇಟ್‌ ಕಾಯ್ದುಕೊಂಡಿದ್ದು, 3 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿಲ್ಲ
ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಕಳೆದ 4 ಆವೃತ್ತಿಗಳಲ್ಲಿ ಗರಿಷ್ಠ ಸ್ಕೋರ್‌ ಮಾಡಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಸರ್ಫರಾಝ್‌ ಖಾನ್‌ಗೆ ಭಾರತ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು ಅಭಿಪ್ರಾಯ ಪಟ್ಟಿದ್ದರು. ಆದರೆ, ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ಈ ಬಗ್ಗೆ ಕಿವಿಕೊಟ್ಟಿಲ್ಲ. ರನ್‌ ಗಳಿಸಿದರಷ್ಟೇ ಸಾಲದು, ಸರ್ಫರಾಝ್ ಖಾನ್ ತಮ್ಮ ತೂಕ ಇಳಿಸಿಕೊಂಡು ಫಿಟ್ನೆಸ್‌ ಕಡೆಗೂ ಗಮನ ನೀಡಬೇಕು ಎಂಬುದು ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ವಾದವಾಗಿದೆ.

2023-24ರ ಸಾಲಿನ ದೇಶಿ ಕ್ರಿಕೆಟ್‌ ಚಟುವಟಿಕೆಗಳು ಮತ್ತೆ ಶುರುವಾಗಲಿದ್ದು, ಈ ಬಾರಿಯೂ ತಮ್ಮ ಆರ್ಭಟ ಮುಂದುವರಿಸಿ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಕಡೆಗೆ ಸರ್ಫರಾಝ್‌ ಖಾನ್‌ ಗಮನ ನೀಡಿದ್ದಾರೆ. ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಸರ್ಫರಾಝ್‌ಗೆ ಶೀಘಘ್ರವೇ ಟೀಮ್ ಇಂಡಿಯಾದ ಕದ ಕೂಡ ತೆರೆದರೆ ಅಚ್ಚರಿಯೇನಿಲ್ಲ. ಆದರೆ, ಭಾರತ ತಂಡದಲ್ಲಿ ಸ್ಥಾನ ಪಡೆಯಲು ಈಗ ಯುವ ಆಟಗಾರರ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಒಬ್ಬರನ್ನು ಒಬ್ಬರು ಮೀರಿಸುವಂತಹ ಆಟಗಾರರು ಇಂದು ಬೆಳಕಿಗೆ ಬರುತ್ತಿದ್ದಾರೆ

andolanait

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

4 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

4 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

4 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

5 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

8 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

8 hours ago