ಕ್ರೀಡೆ

ಕಾಶ್ಮೀರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್‌ ಸರ್ಫರಾಝ್ ಖಾನ್!

ಬೆಂಗಳೂರು: ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟಾರ್ ಬ್ಯಾಟರ್‌ ಸರ್ಫರಾಝ್‌ ಖಾನ್, ತಮ್ಮ ವೈವಾಹಿಕ ಜೀವನದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ಜಮ್ಮು – ಕಾಶ್ಮೀರದ ಶೊಪಿಯಾನ್‌ ಜಿಲ್ಲೆಯಲ್ಲಿ ಭಾನುವಾರ (ಆಗಸ್ಟ್ 7) ನಡೆದ ಖಾಸಗಿ ಸಮಾರಂಭದಲ್ಲಿ ಕಣಿವೆ ರಾಜ್ಯದ ಸುಂದರಿಯನ್ನು ತಮ್ಮ ಬಾಳ ಸಂಗಾತಿಯನ್ನಾಗಿ ಸ್ವೀಕರಿಸಿದ್ದಾರೆ. ತಮ್ಮ ವಿವಾಹದ ಸುದ್ದಿಯನ್ನು ಸರ್ಫರಾಝ್‌ ಖಾನ್‌ ಸೋಷಿಯಲ್ ಮೀಡಿಯಾಗಳ ಮೂಲಕ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ.

ವಿವಾಹದ ಬಳಿಕ ಸ್ಥಳೀಯ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಸರ್ಫರಾಝ್‌ ಖಾನ್‌, ತಮ್ಮ ವಿವಾಹ ಇದೇ ರೀತಿ ಆಗಬೇಕೆಂಬುದು ವಿಧಿ ಲಿಖಿತವಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ತಂಡದ ಪರ ಆಡುವ ಆಶಾಭಾವವನ್ನೂ ಇದೇ ವೇಳೆ ಹೊರಹಾಕಿದ್ದಾರೆ.

25 ವರ್ಷದ ಬಲಗೈ ಬ್ಯಾಟರ್‌ ಹಾಗೂ ವಿಕೆಟ್‌ಕೀಪರ್‌, ದೇಶಿ ಕ್ರಿಕೆಟ್‌ನಲ್ಲಿ ಈವರೆಗೆ ಆಡಿರುವ 39 ಪ್ರಥಮದೆರ್ಜೆ ಪಂದ್ಯಗಳಲ್ಲಿ ಒಟ್ಟಾರೆ 3559 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ 13 ಶತಕಗಳು ಸೇರಿವೆ. 301* ರನ್‌ ಅವರ ವೈಯಕ್ತಿಕ ಗರಿಷ್ಠ ಸ್ಕೋರ್‌ ಆಗಿದೆ. ರಣಜಿ ಟ್ರೋಫಿ ಕ್ರಿಕೆಟ್‌ನ ಕಳೆದ 4 ಆವೃತ್ತಿಗಳಲ್ಲಿ ಸರ್ಫರಾಝ್‌ ಖಾನ್‌, 74.14ರ ಸರಾಸರಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿದ ಬ್ಯಾಟರ್‌ ಆಗಿದ್ದಾರೆ.

ಲಿಸ್ಟ್‌ ‘ಎ’ ಕ್ರಿಕೆಟ್‌ನಲ್ಲೂ ಆಡಿದ 31 ಪಂದ್ಯಗಳಲ್ಲಿ 2 ಶತಕಗಳೊಂದಿಗೆ 538 ರನ್‌ ಬಾರಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ಪಳಗಿರುವ ಸರ್ಫರಾಝ್‌, 88 ಪಂದ್ಯಗಳಿಂದ 1124 ರನ್‌ ಗಳಿಸಿದ್ದಾರೆ. ಇದರಲ್ಲಿ 128.89ರ ಸ್ಟ್ರೈಕ್‌ರೇಟ್‌ ಕಾಯ್ದುಕೊಂಡಿದ್ದು, 3 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿಲ್ಲ
ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಕಳೆದ 4 ಆವೃತ್ತಿಗಳಲ್ಲಿ ಗರಿಷ್ಠ ಸ್ಕೋರ್‌ ಮಾಡಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಸರ್ಫರಾಝ್‌ ಖಾನ್‌ಗೆ ಭಾರತ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು ಅಭಿಪ್ರಾಯ ಪಟ್ಟಿದ್ದರು. ಆದರೆ, ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ಈ ಬಗ್ಗೆ ಕಿವಿಕೊಟ್ಟಿಲ್ಲ. ರನ್‌ ಗಳಿಸಿದರಷ್ಟೇ ಸಾಲದು, ಸರ್ಫರಾಝ್ ಖಾನ್ ತಮ್ಮ ತೂಕ ಇಳಿಸಿಕೊಂಡು ಫಿಟ್ನೆಸ್‌ ಕಡೆಗೂ ಗಮನ ನೀಡಬೇಕು ಎಂಬುದು ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ವಾದವಾಗಿದೆ.

2023-24ರ ಸಾಲಿನ ದೇಶಿ ಕ್ರಿಕೆಟ್‌ ಚಟುವಟಿಕೆಗಳು ಮತ್ತೆ ಶುರುವಾಗಲಿದ್ದು, ಈ ಬಾರಿಯೂ ತಮ್ಮ ಆರ್ಭಟ ಮುಂದುವರಿಸಿ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಕಡೆಗೆ ಸರ್ಫರಾಝ್‌ ಖಾನ್‌ ಗಮನ ನೀಡಿದ್ದಾರೆ. ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಸರ್ಫರಾಝ್‌ಗೆ ಶೀಘಘ್ರವೇ ಟೀಮ್ ಇಂಡಿಯಾದ ಕದ ಕೂಡ ತೆರೆದರೆ ಅಚ್ಚರಿಯೇನಿಲ್ಲ. ಆದರೆ, ಭಾರತ ತಂಡದಲ್ಲಿ ಸ್ಥಾನ ಪಡೆಯಲು ಈಗ ಯುವ ಆಟಗಾರರ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಒಬ್ಬರನ್ನು ಒಬ್ಬರು ಮೀರಿಸುವಂತಹ ಆಟಗಾರರು ಇಂದು ಬೆಳಕಿಗೆ ಬರುತ್ತಿದ್ದಾರೆ

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago