ಉಡುಪಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅವರು ಉಡುಪಿಯ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.
ವಿಶ್ವಕಪ್ ಗೆದ್ದ ಸಂಭ್ರಮದಲ್ಲಿರುವ ಸೂರ್ಯಕುಮಾರ್ ಅವರು ಮಂಗಳವಾರ (ಜುಲೈ. 9) ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಯಲ್ಲಿ ಉಡುಪಿಯ ಕಾಪುವಿನ ಮಾರಿಗುಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ವಿಶ್ವಕಪ್ ಗೆಲ್ಲಲ್ಲು ಮಾರಿಗುಡಿ ದೇವಾಲಯದಲ್ಲಿ ಹರಕ್ಕೆ ಹೊತ್ತಿದ್ದರು ಎನ್ನಲಾಗಿದ್ದು, ಇಂದು ಆ ಹರಕೆಯನ್ನು ತಮ್ಮ ಬಾಳ ಸಂಗಾತಿಯೊಂದಿಗೆ ಬಂದು ತೀರಿಸಿದ್ದಾರೆ. ಆ ಮೂಲಕ ವಿಶ್ವಕಪ್ ಗೆಲುವಿಗೆ ಕಾರಣರಾದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಮೆರೆದಿದ್ದಾರೆ.
ಇನ್ನು ವಿಶ್ವ ಮಟ್ಟದಲ್ಲಿ ಹೆಸರು ಮಾಡಿರುವ ಸೂರ್ಯಕುಮಾರ್ ಯಾದವ್ ದಂಪತಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಸನ್ಮಾನಿಸಿದೆ.
ಬಳಿಕ ಮಾತನಾಡಿದ ಅವರು, ವಿಶ್ವಕಪ್ ಗೆದ್ದದ್ದು ಬಹಳ ಸಂತೋಷವಾಗಿದೆ. ನಮ್ಮ ದೇಶದಲ್ಲಿ ನಮಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಮುಂದಿನ ಫೆಬ್ರವರಿ, ಮಾರ್ಚ್ ವೇಳೆಗೆ ಇಲ್ಲಿಗೆ ಮತ್ತೊಮ್ಮೆ ಆಗಮಿಸುತ್ತೇವೆ ಎಂದರು.
ಇನ್ನು ಮುಂಬೈನಲ್ಲಿ ನಡೆದ ವಿಜಯಯಾತ್ರೆ ಸಂಬಂಧ ಕೇಳಿದ ಪ್ರಶ್ನೆಗೆ, ಬಹಳ ಸಂತೋಷವಾಯಿತು. ಅಷ್ಟೊಂದು ಜನರನ್ನು ಒಟ್ಟಾಗಿ ನೋಡುವುದು ನಮ್ಮ ಭಾಗ್ಯ ಎಂದು ಸೂರ್ಯಕುಮಾರ್ ಯಾದವ್ ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…