ಉಡುಪಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅವರು ಉಡುಪಿಯ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.
ವಿಶ್ವಕಪ್ ಗೆದ್ದ ಸಂಭ್ರಮದಲ್ಲಿರುವ ಸೂರ್ಯಕುಮಾರ್ ಅವರು ಮಂಗಳವಾರ (ಜುಲೈ. 9) ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಯಲ್ಲಿ ಉಡುಪಿಯ ಕಾಪುವಿನ ಮಾರಿಗುಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ವಿಶ್ವಕಪ್ ಗೆಲ್ಲಲ್ಲು ಮಾರಿಗುಡಿ ದೇವಾಲಯದಲ್ಲಿ ಹರಕ್ಕೆ ಹೊತ್ತಿದ್ದರು ಎನ್ನಲಾಗಿದ್ದು, ಇಂದು ಆ ಹರಕೆಯನ್ನು ತಮ್ಮ ಬಾಳ ಸಂಗಾತಿಯೊಂದಿಗೆ ಬಂದು ತೀರಿಸಿದ್ದಾರೆ. ಆ ಮೂಲಕ ವಿಶ್ವಕಪ್ ಗೆಲುವಿಗೆ ಕಾರಣರಾದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಮೆರೆದಿದ್ದಾರೆ.
ಇನ್ನು ವಿಶ್ವ ಮಟ್ಟದಲ್ಲಿ ಹೆಸರು ಮಾಡಿರುವ ಸೂರ್ಯಕುಮಾರ್ ಯಾದವ್ ದಂಪತಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಸನ್ಮಾನಿಸಿದೆ.
ಬಳಿಕ ಮಾತನಾಡಿದ ಅವರು, ವಿಶ್ವಕಪ್ ಗೆದ್ದದ್ದು ಬಹಳ ಸಂತೋಷವಾಗಿದೆ. ನಮ್ಮ ದೇಶದಲ್ಲಿ ನಮಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಮುಂದಿನ ಫೆಬ್ರವರಿ, ಮಾರ್ಚ್ ವೇಳೆಗೆ ಇಲ್ಲಿಗೆ ಮತ್ತೊಮ್ಮೆ ಆಗಮಿಸುತ್ತೇವೆ ಎಂದರು.
ಇನ್ನು ಮುಂಬೈನಲ್ಲಿ ನಡೆದ ವಿಜಯಯಾತ್ರೆ ಸಂಬಂಧ ಕೇಳಿದ ಪ್ರಶ್ನೆಗೆ, ಬಹಳ ಸಂತೋಷವಾಯಿತು. ಅಷ್ಟೊಂದು ಜನರನ್ನು ಒಟ್ಟಾಗಿ ನೋಡುವುದು ನಮ್ಮ ಭಾಗ್ಯ ಎಂದು ಸೂರ್ಯಕುಮಾರ್ ಯಾದವ್ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…