ಕ್ರೀಡೆ

IPL 2024: ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ; ಕೆಕೆಆರ್‌ ಹೀನಾಯ ಸೋಲು!

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 137 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಸಿಎಸ್‌ಕೆ 17.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 141 ರನ್‌ಗಳಿಸಿ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಇತ್ತ ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಇನ್ನಿಂಗ್ಸ್‌ ಆರಂಭದ ಮೊದಲ ಬಾಲ್‌ನಲ್ಲೇ ಆಘಾತ ಎದುರಾಯಿತು. ಫಿಲ್ ಸಾಲ್ಟ್ 0(1) ನಿರ್ಗಮಿಸಿದರು. ನಂತರ ಸುನಿಲ್ ನರೈನ್ 27(20), ಅಂಗ್ರ್ಕಿಶ್ ರಘುವಂಶಿ 24(18) ತಂಡಕ್ಕೆ ಚೇತರಿಕೆ ಆಟವಾಡಿದರು. ನಾಯಕ ಶ್ರೇಯಸ್ ಅಯ್ಯರ್ 34(32) ರನ್‌ ಗಳಿಸಿದ್ದೇ ತಂಡದ ಪರ ಗರಿಷ್ಠ. ಉಳಿದಂತೆ ವೆಂಕಟೇಶ್ ಅಯ್ಯರ್ 3(8), ರಮಣದೀಪ್ ಸಿಂಗ್ 13(12) , ರಿಂಕು ಸಿಂಗ್ 9(14), ಆಂಡ್ರೆ ರಸೆಲ್ 10(10) , ಅನುಕೂಲ್ ರಾಯ್ 3(3), ಮಿಚೆಲ್ ಸ್ಟಾರ್ಕ್ 0(3), ವೈಭವ್ ಅರೋರಾ 1(1) ರನ್ ಗಳಿಸಿದರು. ಕೆಕೆಆರ್‌ಗೆ ಮಧ್ಯಮ ಕ್ರಮಾಂಕ ಕೈ ಹಿಡಿಯುವಲ್ಲಿ ವಿಫಲವಾಗಿ ತಂಡ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾ 3, ಮುಸ್ತಫಿಜುರ್ ರೆಹಮಾನ್ 2 ಮತ್ತು ತೀಕ್ಷಣ 1 ವಿಕೆಟ್‌ ಪಡೆದು ಮಿಂಚಿದರು.

ಸಿಎಸ್‌ಕೆ ಇನ್ನಿಂಗ್ಸ್‌: ಸಿಎಸ್‌ಕೆ ಪರ ನಾಯಕ ಋತುರಾಜ್‌ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಋತುರಾಜ್‌ ಔಟಾಗದೇ 58 ಎಸೆತಗಳಲ್ಲಿ 9 ಬೌಂಡರಿ ಸಹಿತ 67 ರನ್‌ ಕಲೆಹಾಕಿ ಕೊನೆವರೆಗು ನಿಂತು ಪಂದ್ಯ ಮುಗಿಸಿದರು. ಉಳಿದಂತೆ ರಚಿನ್‌ ರವೀಂದ್ರ 15(8), ಡೇರಿಯಲ್‌ ಮಿಚೆಲ್‌ 25(19), ಶಿವಂ ದುಬೆ 28(18) ಮತ್ತು ಎಂ.ಎಸ್‌ ಧೋನಿ 1(3) ರನ್‌ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಕೆಕೆಆರ್‌ ಪರ ಅರೋರ 2, ಸುನೀಲ್‌ ನರೈನ್‌ ಒಂದು ವಿಕೆಟ್‌ ಕಿತ್ತರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

19 mins ago

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

37 mins ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

50 mins ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

2 hours ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

3 hours ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

3 hours ago