ಕ್ರೀಡೆ

IPL 2024: ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ; ಕೆಕೆಆರ್‌ ಹೀನಾಯ ಸೋಲು!

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 137 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಸಿಎಸ್‌ಕೆ 17.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 141 ರನ್‌ಗಳಿಸಿ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಇತ್ತ ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಇನ್ನಿಂಗ್ಸ್‌ ಆರಂಭದ ಮೊದಲ ಬಾಲ್‌ನಲ್ಲೇ ಆಘಾತ ಎದುರಾಯಿತು. ಫಿಲ್ ಸಾಲ್ಟ್ 0(1) ನಿರ್ಗಮಿಸಿದರು. ನಂತರ ಸುನಿಲ್ ನರೈನ್ 27(20), ಅಂಗ್ರ್ಕಿಶ್ ರಘುವಂಶಿ 24(18) ತಂಡಕ್ಕೆ ಚೇತರಿಕೆ ಆಟವಾಡಿದರು. ನಾಯಕ ಶ್ರೇಯಸ್ ಅಯ್ಯರ್ 34(32) ರನ್‌ ಗಳಿಸಿದ್ದೇ ತಂಡದ ಪರ ಗರಿಷ್ಠ. ಉಳಿದಂತೆ ವೆಂಕಟೇಶ್ ಅಯ್ಯರ್ 3(8), ರಮಣದೀಪ್ ಸಿಂಗ್ 13(12) , ರಿಂಕು ಸಿಂಗ್ 9(14), ಆಂಡ್ರೆ ರಸೆಲ್ 10(10) , ಅನುಕೂಲ್ ರಾಯ್ 3(3), ಮಿಚೆಲ್ ಸ್ಟಾರ್ಕ್ 0(3), ವೈಭವ್ ಅರೋರಾ 1(1) ರನ್ ಗಳಿಸಿದರು. ಕೆಕೆಆರ್‌ಗೆ ಮಧ್ಯಮ ಕ್ರಮಾಂಕ ಕೈ ಹಿಡಿಯುವಲ್ಲಿ ವಿಫಲವಾಗಿ ತಂಡ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾ 3, ಮುಸ್ತಫಿಜುರ್ ರೆಹಮಾನ್ 2 ಮತ್ತು ತೀಕ್ಷಣ 1 ವಿಕೆಟ್‌ ಪಡೆದು ಮಿಂಚಿದರು.

ಸಿಎಸ್‌ಕೆ ಇನ್ನಿಂಗ್ಸ್‌: ಸಿಎಸ್‌ಕೆ ಪರ ನಾಯಕ ಋತುರಾಜ್‌ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಋತುರಾಜ್‌ ಔಟಾಗದೇ 58 ಎಸೆತಗಳಲ್ಲಿ 9 ಬೌಂಡರಿ ಸಹಿತ 67 ರನ್‌ ಕಲೆಹಾಕಿ ಕೊನೆವರೆಗು ನಿಂತು ಪಂದ್ಯ ಮುಗಿಸಿದರು. ಉಳಿದಂತೆ ರಚಿನ್‌ ರವೀಂದ್ರ 15(8), ಡೇರಿಯಲ್‌ ಮಿಚೆಲ್‌ 25(19), ಶಿವಂ ದುಬೆ 28(18) ಮತ್ತು ಎಂ.ಎಸ್‌ ಧೋನಿ 1(3) ರನ್‌ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಕೆಕೆಆರ್‌ ಪರ ಅರೋರ 2, ಸುನೀಲ್‌ ನರೈನ್‌ ಒಂದು ವಿಕೆಟ್‌ ಕಿತ್ತರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

1 min ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

19 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

31 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago