ಕ್ರೀಡೆ

IPL 2024: ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ; ಕೆಕೆಆರ್‌ ಹೀನಾಯ ಸೋಲು!

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 137 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಸಿಎಸ್‌ಕೆ 17.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 141 ರನ್‌ಗಳಿಸಿ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಇತ್ತ ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಇನ್ನಿಂಗ್ಸ್‌ ಆರಂಭದ ಮೊದಲ ಬಾಲ್‌ನಲ್ಲೇ ಆಘಾತ ಎದುರಾಯಿತು. ಫಿಲ್ ಸಾಲ್ಟ್ 0(1) ನಿರ್ಗಮಿಸಿದರು. ನಂತರ ಸುನಿಲ್ ನರೈನ್ 27(20), ಅಂಗ್ರ್ಕಿಶ್ ರಘುವಂಶಿ 24(18) ತಂಡಕ್ಕೆ ಚೇತರಿಕೆ ಆಟವಾಡಿದರು. ನಾಯಕ ಶ್ರೇಯಸ್ ಅಯ್ಯರ್ 34(32) ರನ್‌ ಗಳಿಸಿದ್ದೇ ತಂಡದ ಪರ ಗರಿಷ್ಠ. ಉಳಿದಂತೆ ವೆಂಕಟೇಶ್ ಅಯ್ಯರ್ 3(8), ರಮಣದೀಪ್ ಸಿಂಗ್ 13(12) , ರಿಂಕು ಸಿಂಗ್ 9(14), ಆಂಡ್ರೆ ರಸೆಲ್ 10(10) , ಅನುಕೂಲ್ ರಾಯ್ 3(3), ಮಿಚೆಲ್ ಸ್ಟಾರ್ಕ್ 0(3), ವೈಭವ್ ಅರೋರಾ 1(1) ರನ್ ಗಳಿಸಿದರು. ಕೆಕೆಆರ್‌ಗೆ ಮಧ್ಯಮ ಕ್ರಮಾಂಕ ಕೈ ಹಿಡಿಯುವಲ್ಲಿ ವಿಫಲವಾಗಿ ತಂಡ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾ 3, ಮುಸ್ತಫಿಜುರ್ ರೆಹಮಾನ್ 2 ಮತ್ತು ತೀಕ್ಷಣ 1 ವಿಕೆಟ್‌ ಪಡೆದು ಮಿಂಚಿದರು.

ಸಿಎಸ್‌ಕೆ ಇನ್ನಿಂಗ್ಸ್‌: ಸಿಎಸ್‌ಕೆ ಪರ ನಾಯಕ ಋತುರಾಜ್‌ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಋತುರಾಜ್‌ ಔಟಾಗದೇ 58 ಎಸೆತಗಳಲ್ಲಿ 9 ಬೌಂಡರಿ ಸಹಿತ 67 ರನ್‌ ಕಲೆಹಾಕಿ ಕೊನೆವರೆಗು ನಿಂತು ಪಂದ್ಯ ಮುಗಿಸಿದರು. ಉಳಿದಂತೆ ರಚಿನ್‌ ರವೀಂದ್ರ 15(8), ಡೇರಿಯಲ್‌ ಮಿಚೆಲ್‌ 25(19), ಶಿವಂ ದುಬೆ 28(18) ಮತ್ತು ಎಂ.ಎಸ್‌ ಧೋನಿ 1(3) ರನ್‌ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಕೆಕೆಆರ್‌ ಪರ ಅರೋರ 2, ಸುನೀಲ್‌ ನರೈನ್‌ ಒಂದು ವಿಕೆಟ್‌ ಕಿತ್ತರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

6 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

7 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

7 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

8 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

8 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

9 hours ago