ಕ್ರೀಡೆ

ಭಾರತದ ಡಿ.ಗುಕೇಶ್‌ ವಿಶ್ವ ಚೆಸ್‌ ಚಾಂಪಿಯನ್‌

ಸಿಂಗಾಪುರ: ಡಿ ಗುಕೇಶ್‌ ಅವರು ಇಂದು ಹಾಲಿ ಚಾಂಪಿಯನ್‌ ಚೀನಾದ ಲಿರೆನ್‌ ಅವರನ್ನು ಸೋಲಿಸಿ FIDE ವಿಶ್ವ ಚಾಂಪಿಯನ್‌ ಶಿಪ್ 2024ನ್ನು ಗೆದ್ದಿದ್ದಾರೆ.

ಭಾರತೀಯ ಗ್ರ್ಯಾಂಡ್‌ಮಾಸ್ಟರ್‌ ಡಿ ಗುಕೇಶ್ 18ನೇ ಮತ್ತು ಅತ್ಯಂತ ಕಿರಿಯ ಚೆಸ್‌ ವಿಶ್ವ ಚಾಂಪಿಯನ್‌ ಆಗಿದ್ದಾರೆ. 14ನೇ ಗೇಮ್‌ ಗೆದ್ದ ನಂತರ ಗುಕೇಶ್‌ ತಮ್ಮ ಸಾಧನೆಗೆ ಆನಂದ ಭಾಷ್ಪ ಹರಿಸಿದ್ದಾರೆ.

14-ಗೇಮ್‌ನ ಕೊನೆಯ ಕ್ಲಾಸಿಕಲ್‌ ಟೈಮ್‌ ಕಂಟ್ರೋಲ್‌ ಗೇಮ್‌ ಅನ್ನು ಗೆದ್ದ ನಂತರ ಲಿರೆನ್‌ನ 6.5ಕ್ಕೆ ವಿರುದ್ಧವಾಗಿ ಅಗತ್ಯವಿರುವ 7.5 ಪಾಯಿಂಟ್‌ಗಳನ್ನು ಗುಕೇಶ್‌ ಗಳಿಸಿದ್ದಾರೆ.

ಇಂದು ಗುಕೇಶ್‌ ಅವರ ಸಾಧನೆಯ ಮೊದಲು, ರಷ್ಯಾದ ದಂತಕಥೆ ಗ್ಯಾರಿ ಕಾಸ್ಪರೋವ್‌ ಅವರು 1985ರಲ್ಲಿ ಅನಾಟೊಲಿ ಕಾರ್ಪೋವ್‌ ಅವರನ್ನು ಪದಚ್ಯುತಗೊಳಿಸಿ 22ನೇ ವಯಸ್ಸಿನಲ್ಲಿ ಪ್ರಶಸ್ತಿಯನ್ನು ಗೆದ್ದಾಗ ಅತ್ಯಂತ ಕಿರಿಯ ವಿಶ್ವ ಚೆಸ್‌ ಚಾಂಪಿಯನ್‌ ಆಗಿದ್ದರು.

ಈ ವರ್ಷದ ಆರಂಭದಲ್ಲಿ ಕ್ಯಾಂಡಿಡೇಟ್ಟ್‌ ಪಂದ್ಯಾವಳಿಯನ್ನು ಗೆದ್ದ ನಂತರ ಗುಕೇಶ್‌ ಅವರು ಅತ್ಯಂತ ಕಿರಿಯ ಆಟಗಾರನಾಗಿ ಕೂಟ ಪ್ರವೇಶಿಸಿದ್ದರು.

ವಿಶ್ವನಾಥನ್‌ ಆನಂದ್‌ ನಂತರ ಡಿ.ಗುಕೇಶ್‌ ಅವರು ಜಾಗತಿಕ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯರಾಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

10 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

11 hours ago