ಕ್ರೀಡೆ

ಡ್ಯಾರಿಲ್ ಮಿಚೆಲ್ ಶತಕ: ಭಾರತಕ್ಕೆ 274 ರನ್ ಗುರಿ ನೀಡಿದ ನ್ಯೂಜಿಲ್ಯಾಂಡ್‌

ಧರ್ಮಶಾಲಾ : ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ಭಾರತದ ಗೆಲುವಿಗೆ ನ್ಯೂಝಿಲ್ಯಾಂಡ್ 274 ರನ್ ಗುರಿ ನೀಡಿದೆ.

ಡ್ಯಾರಿಲ್ ಮಿಚೆಲ್ ಆಕರ್ಷಕ ಶತಕ ಹಾಗೂ ರಚಿನ್ ರವೀಂದ್ರ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ ನ್ಯೂಝಿಲ್ಯಾಂಡ್ 273 ರನ್ ಗೆ ಆಲೌಟ್ ಆಯಿತು.

ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇತ್ತ ಬ್ಯಾಟಿಂಗ್ ಗೆ ಇಳಿದ ಕಿವೀಸ್ ನ ಆರಂಭಿಕ ಬ್ಯಾಟರ್ ಗಳಾದ ಡೇವಾನ್ ಕಾನ್ವೆ ಶೂನ್ಯಕ್ಕೆ ಹಾಗೂ ವಿಲ್ ಯಂಗ್ ರನ್ನು 17 ರನ್ ಗೆ ಔಟ್ ಮಾಡುವ ಮೂಲಕ ಮುಹಮ್ಮದ್ ಸಿರಾಜ್ ಮತ್ತು ಶಮಿ ಆಘಾತ ನೀಡಿದರು.

ಟೂರ್ನಿಯಲ್ಲಿ ಮೊದಲ ಪಂದ್ಯ ಆಡುತ್ತಿರುವ ಮುಹಮ್ಮದ್ ಶಮಿ ತಾನು ಎಸೆದ ಮೊದಲ ಬಾಲ್ ನಲ್ಲಿಯೇ ವಿಲ್ ಯಂಗ್ ರನ್ನು ಬೌಲ್ಡ್ ಮಾಡುವ ಮೂಲಕ ವಿಶೇಷ ದಾಖಲೆ ನಿರ್ಮಿಸಿದರು. ಕೇವಲ 19 ರನ್ ಗೆ 2 ಪ್ರಮುಖ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ್ದ ಕಿವೀಸ್ ಗೆ ಡ್ಯಾರಿಲ್ ಮಿಚೆಲ್ ಹಾಗೂ ರಚಿನ್ ರವೀಂದ್ರ ಜೋಡಿ ನಿಯಮಿತ ಅಂತರದಲ್ಲಿ ಬೌಂಡರಿ ಸಿಕ್ಸರ್ ಸಿಡಿಸುವ ಮೂಲಕ ಭಾರತದ ಸಂಘಟಿತ ಬೌಲಿಂಗ್ ದಾಳಿಯನ್ನು ನಿಭಾಯಿಸಿದರು.

ರಚಿನ್ ರವೀಂದ್ರ 6 ಬೌಂಡರಿ 1 ಸಿಕ್ಸರ್ ಸಹಿತ 75 ರನ್ ಬಾರಿಸಿ ಮುಹಮ್ಮದ್ ಶಮಿ ಬೌಲಿಂಗ್ ನಲ್ಲಿ ಶುಭ ಮನ್ ಗಿಲ್ ಗೆ ಕ್ಯಾಚ್ ನೀಡಿ ಔಟ್ ಆದರೆ ನಾಯಕ ಟಾಮ್ ಲ್ಯಾಥಮ್ 5 ರನ್ ಗೆ ಕುಲದೀಪ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲೂ ಆದರು. ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಡ್ಯಾರಿಲ್ ಮಿಚೆಲ್ 9 ಬೌಂಡರಿ 5 ಸಿಕ್ಸರ್ ನೆರವಿನಿಂದ 130 ಬಾರಿಸಿದರು. ಗ್ಲೆನ್ ಫಿಲಿಪ್ಸ್ 23, ಮಾರ್ಕ್ ಚಾಪ್ಮನ್ 6, ಮಿಷೆಲ್ ಸಾಂಟ್ನರ್ 1, ಮ್ಯಾಟ್ ಹೆನ್ರಿ 0, ಲೋಕಿ ಫರ್ಗುಸನ್ 1 ರನ್ ಗಳಿಸಿದರು.

ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮುಹಮ್ಮದ್ ಶಮಿ 5 ವಿಕೆಟ್ ಪಡೆದರೆ ಕುಲದೀಪ್ ಯಾದವ್ 2 ವಿಕೆಟ್, ಬೂಮ್ರ, ಸಿರಾಜ್ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

1 hour ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago