ಕ್ರೀಡೆ

ಡ್ಯಾರಿಲ್ ಮಿಚೆಲ್ ಶತಕ: ಭಾರತಕ್ಕೆ 274 ರನ್ ಗುರಿ ನೀಡಿದ ನ್ಯೂಜಿಲ್ಯಾಂಡ್‌

ಧರ್ಮಶಾಲಾ : ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ಭಾರತದ ಗೆಲುವಿಗೆ ನ್ಯೂಝಿಲ್ಯಾಂಡ್ 274 ರನ್ ಗುರಿ ನೀಡಿದೆ.

ಡ್ಯಾರಿಲ್ ಮಿಚೆಲ್ ಆಕರ್ಷಕ ಶತಕ ಹಾಗೂ ರಚಿನ್ ರವೀಂದ್ರ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ ನ್ಯೂಝಿಲ್ಯಾಂಡ್ 273 ರನ್ ಗೆ ಆಲೌಟ್ ಆಯಿತು.

ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇತ್ತ ಬ್ಯಾಟಿಂಗ್ ಗೆ ಇಳಿದ ಕಿವೀಸ್ ನ ಆರಂಭಿಕ ಬ್ಯಾಟರ್ ಗಳಾದ ಡೇವಾನ್ ಕಾನ್ವೆ ಶೂನ್ಯಕ್ಕೆ ಹಾಗೂ ವಿಲ್ ಯಂಗ್ ರನ್ನು 17 ರನ್ ಗೆ ಔಟ್ ಮಾಡುವ ಮೂಲಕ ಮುಹಮ್ಮದ್ ಸಿರಾಜ್ ಮತ್ತು ಶಮಿ ಆಘಾತ ನೀಡಿದರು.

ಟೂರ್ನಿಯಲ್ಲಿ ಮೊದಲ ಪಂದ್ಯ ಆಡುತ್ತಿರುವ ಮುಹಮ್ಮದ್ ಶಮಿ ತಾನು ಎಸೆದ ಮೊದಲ ಬಾಲ್ ನಲ್ಲಿಯೇ ವಿಲ್ ಯಂಗ್ ರನ್ನು ಬೌಲ್ಡ್ ಮಾಡುವ ಮೂಲಕ ವಿಶೇಷ ದಾಖಲೆ ನಿರ್ಮಿಸಿದರು. ಕೇವಲ 19 ರನ್ ಗೆ 2 ಪ್ರಮುಖ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ್ದ ಕಿವೀಸ್ ಗೆ ಡ್ಯಾರಿಲ್ ಮಿಚೆಲ್ ಹಾಗೂ ರಚಿನ್ ರವೀಂದ್ರ ಜೋಡಿ ನಿಯಮಿತ ಅಂತರದಲ್ಲಿ ಬೌಂಡರಿ ಸಿಕ್ಸರ್ ಸಿಡಿಸುವ ಮೂಲಕ ಭಾರತದ ಸಂಘಟಿತ ಬೌಲಿಂಗ್ ದಾಳಿಯನ್ನು ನಿಭಾಯಿಸಿದರು.

ರಚಿನ್ ರವೀಂದ್ರ 6 ಬೌಂಡರಿ 1 ಸಿಕ್ಸರ್ ಸಹಿತ 75 ರನ್ ಬಾರಿಸಿ ಮುಹಮ್ಮದ್ ಶಮಿ ಬೌಲಿಂಗ್ ನಲ್ಲಿ ಶುಭ ಮನ್ ಗಿಲ್ ಗೆ ಕ್ಯಾಚ್ ನೀಡಿ ಔಟ್ ಆದರೆ ನಾಯಕ ಟಾಮ್ ಲ್ಯಾಥಮ್ 5 ರನ್ ಗೆ ಕುಲದೀಪ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲೂ ಆದರು. ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಡ್ಯಾರಿಲ್ ಮಿಚೆಲ್ 9 ಬೌಂಡರಿ 5 ಸಿಕ್ಸರ್ ನೆರವಿನಿಂದ 130 ಬಾರಿಸಿದರು. ಗ್ಲೆನ್ ಫಿಲಿಪ್ಸ್ 23, ಮಾರ್ಕ್ ಚಾಪ್ಮನ್ 6, ಮಿಷೆಲ್ ಸಾಂಟ್ನರ್ 1, ಮ್ಯಾಟ್ ಹೆನ್ರಿ 0, ಲೋಕಿ ಫರ್ಗುಸನ್ 1 ರನ್ ಗಳಿಸಿದರು.

ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮುಹಮ್ಮದ್ ಶಮಿ 5 ವಿಕೆಟ್ ಪಡೆದರೆ ಕುಲದೀಪ್ ಯಾದವ್ 2 ವಿಕೆಟ್, ಬೂಮ್ರ, ಸಿರಾಜ್ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

2 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

3 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

3 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

3 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

3 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

3 hours ago