ಕ್ರೀಡೆ

ಡ್ಯಾರಿಲ್ ಮಿಚೆಲ್ ಶತಕ: ಭಾರತಕ್ಕೆ 274 ರನ್ ಗುರಿ ನೀಡಿದ ನ್ಯೂಜಿಲ್ಯಾಂಡ್‌

ಧರ್ಮಶಾಲಾ : ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ಭಾರತದ ಗೆಲುವಿಗೆ ನ್ಯೂಝಿಲ್ಯಾಂಡ್ 274 ರನ್ ಗುರಿ ನೀಡಿದೆ.

ಡ್ಯಾರಿಲ್ ಮಿಚೆಲ್ ಆಕರ್ಷಕ ಶತಕ ಹಾಗೂ ರಚಿನ್ ರವೀಂದ್ರ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ ನ್ಯೂಝಿಲ್ಯಾಂಡ್ 273 ರನ್ ಗೆ ಆಲೌಟ್ ಆಯಿತು.

ನ್ಯೂಝಿಲ್ಯಾಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇತ್ತ ಬ್ಯಾಟಿಂಗ್ ಗೆ ಇಳಿದ ಕಿವೀಸ್ ನ ಆರಂಭಿಕ ಬ್ಯಾಟರ್ ಗಳಾದ ಡೇವಾನ್ ಕಾನ್ವೆ ಶೂನ್ಯಕ್ಕೆ ಹಾಗೂ ವಿಲ್ ಯಂಗ್ ರನ್ನು 17 ರನ್ ಗೆ ಔಟ್ ಮಾಡುವ ಮೂಲಕ ಮುಹಮ್ಮದ್ ಸಿರಾಜ್ ಮತ್ತು ಶಮಿ ಆಘಾತ ನೀಡಿದರು.

ಟೂರ್ನಿಯಲ್ಲಿ ಮೊದಲ ಪಂದ್ಯ ಆಡುತ್ತಿರುವ ಮುಹಮ್ಮದ್ ಶಮಿ ತಾನು ಎಸೆದ ಮೊದಲ ಬಾಲ್ ನಲ್ಲಿಯೇ ವಿಲ್ ಯಂಗ್ ರನ್ನು ಬೌಲ್ಡ್ ಮಾಡುವ ಮೂಲಕ ವಿಶೇಷ ದಾಖಲೆ ನಿರ್ಮಿಸಿದರು. ಕೇವಲ 19 ರನ್ ಗೆ 2 ಪ್ರಮುಖ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ್ದ ಕಿವೀಸ್ ಗೆ ಡ್ಯಾರಿಲ್ ಮಿಚೆಲ್ ಹಾಗೂ ರಚಿನ್ ರವೀಂದ್ರ ಜೋಡಿ ನಿಯಮಿತ ಅಂತರದಲ್ಲಿ ಬೌಂಡರಿ ಸಿಕ್ಸರ್ ಸಿಡಿಸುವ ಮೂಲಕ ಭಾರತದ ಸಂಘಟಿತ ಬೌಲಿಂಗ್ ದಾಳಿಯನ್ನು ನಿಭಾಯಿಸಿದರು.

ರಚಿನ್ ರವೀಂದ್ರ 6 ಬೌಂಡರಿ 1 ಸಿಕ್ಸರ್ ಸಹಿತ 75 ರನ್ ಬಾರಿಸಿ ಮುಹಮ್ಮದ್ ಶಮಿ ಬೌಲಿಂಗ್ ನಲ್ಲಿ ಶುಭ ಮನ್ ಗಿಲ್ ಗೆ ಕ್ಯಾಚ್ ನೀಡಿ ಔಟ್ ಆದರೆ ನಾಯಕ ಟಾಮ್ ಲ್ಯಾಥಮ್ 5 ರನ್ ಗೆ ಕುಲದೀಪ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲೂ ಆದರು. ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಡ್ಯಾರಿಲ್ ಮಿಚೆಲ್ 9 ಬೌಂಡರಿ 5 ಸಿಕ್ಸರ್ ನೆರವಿನಿಂದ 130 ಬಾರಿಸಿದರು. ಗ್ಲೆನ್ ಫಿಲಿಪ್ಸ್ 23, ಮಾರ್ಕ್ ಚಾಪ್ಮನ್ 6, ಮಿಷೆಲ್ ಸಾಂಟ್ನರ್ 1, ಮ್ಯಾಟ್ ಹೆನ್ರಿ 0, ಲೋಕಿ ಫರ್ಗುಸನ್ 1 ರನ್ ಗಳಿಸಿದರು.

ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮುಹಮ್ಮದ್ ಶಮಿ 5 ವಿಕೆಟ್ ಪಡೆದರೆ ಕುಲದೀಪ್ ಯಾದವ್ 2 ವಿಕೆಟ್, ಬೂಮ್ರ, ಸಿರಾಜ್ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

32 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago