ಕ್ರೀಡೆ

ಐಪಿಎಲ್‌ ಮಿನಿ ಹರಾಜಿಗೆ ಡೇಟ್‌ ಫಿಕ್ಸ್‌

ಐಪಿಎಲ್‌ 2023 ಹರಾಜು: ಟಿ20 ವಿಶ್ವಕಪ್​ ಶುರುವಾದ ಬೆನ್ನಲ್ಲೇ ಇತ್ತ ಬಿಸಿಸಿಐ ಐಪಿಎಲ್ (IPL 2023) ಸೀಸನ್ 16 ಗೆ ತಯಾರಿಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಐಪಿಎಲ್ 2023 ರ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಈ ವರ್ಷ ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ಆಟಗಾರರ ಹರಾಜು ನಡೆಸಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ. ನವೆಂಬರ್ 13 ರಂದು ಟಿ20 ವಿಶ್ವಕಪ್ ಮುಕ್ತಾಯವಾಗಲಿದ್ದು, ಇದಾಗಿ ಒಂದು ತಿಂಗಳಲ್ಲೇ ಆಟಗಾರರ ಹರಾಜು ನಡೆಯಲಿರುವುದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಈ ಬಾರಿ ಐಪಿಎಲ್​ನಲ್ಲಿ ಡೀಲ್ ಕುದುರಿಸಿಕೊಳ್ಳುವ ಅವಕಾಶ ಆಟಗಾರರಿಗೆ ಇರಲಿದೆ.

ಮಿನಿ ಹರಾಜು:

ಈ ಬಾರಿ ಐಪಿಎಲ್​ನಲ್ಲಿ ಮಿನಿ ಹರಾಜು ನಡೆಯಲಿದೆ. ಕಳೆದ ಬಾರಿ ಮೆಗಾ ಹರಾಜು ನಡೆದಿರುವ ಹಿನ್ನಲೆಯಲ್ಲಿ ಈ ಸಲ ಆಯಾ ತಂಡವು ಬಿಡುಗಡೆ ಮಾಡುವ ಆಟಗಾರರ ಸ್ಥಾನಕ್ಕಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಉಳಿಸಿಕೊಳ್ಳುವ ಹಾಗೂ ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಬೇಕಾಗುತ್ತದೆ.

ಇತ್ತ ಟಿ20 ವಿಶ್ವಕಪ್ ಜರುಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳಿಗೆ ಆಟಗಾರರ ಫಾರ್ಮ್​ ಅನ್ನು ಕೂಡ ಗಣನೆಗೆ ತೆಗೆದುಕೊಳ್ಳಬಹುದು. ಈ ಮೂಲಕ ಯಾರನ್ನು ತಂಡದಲ್ಲೇ ಉಳಿಸಿಕೊಳ್ಳಬೇಕು ಮತ್ತು ಬಿಡುಗಡೆ ಮಾಡಬೇಕು ಎಂಬುದನ್ನು ನಿರ್ಧರಿಸಬಹುದು.

andolana

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

3 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

6 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

6 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

7 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

7 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

7 hours ago