ಕ್ರೀಡೆ

DC v/s LSG: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ ಲೆಕ್ಕಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದೆ.

ಡೆಲಿ ತಂಡಕ್ಕೆ ಫಾಫ್‌ ಡುಪ್ಲೆಸಿಸ್‌ ಅವರ ಆಗಮನದಿಂದ ಬ್ಯಾಟಿಂಗ್‌ ಬಲ ಹೆಚ್ಚಾಗಿದೆ. ಜೊತೆಗೆ ಯುವ ಆಟಗಾರ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌, ಕರುಣ್‌ ನಾಯರ್‌, ಅಭಿಷೇಕ್‌ ಪೊರೆಲ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅವರು ಕೂಡ ಡೆಲ್ಲಿಗೆ ಬ್ಯಾಟಿಂಗ್‌ನಲ್ಲಿ ಶಕ್ತಿ ತುಂಬಬಲ್ಲರು. ಬೌಲಿಂಗ್‌ನಲ್ಲಿ ವೇಗಿ ಮಿಚೆಲ್‌ ಸ್ಟಾರ್ಕ್‌, ಟಿ.ನಟರಾಜನ್‌, ಮೋಹಿತ್‌ ಶರ್ಮಾ ಮತ್ತು ಮುಕೇಶ್‌ ಕುಮಾರ್‌ ಇದ್ದಾರೆ. ಸ್ಪಿನ್‌ ವಿಭಾಗದಲ್ಲಿ ಕುಲದೀಪ್‌ ಹೊಣೆ ನಿಭಾಯಿಸಲಿದ್ದಾರೆ.

ಇತ್ತ ಲಖನೌ ತಂಡಕ್ಕೆ ರಿಷಭ್‌ ಪಂತ್‌ ನಾಯಕರಾಗಿ ತಂಡದ ಹೊಣೆ ಹೊತ್ತುಕೊಂಡಿದ್ದು, ಜೊತೆಗೆ ಡೇವಿಡ್‌ ಮಿಲ್ಲರ್‌, ಏಡನ್‌ ಮರ್ಕರಂ ಮತ್ತು ನಿಕೋಲಸ್‌ ಪೂರನ್‌ ಮಿಚೆಲ್‌ ಮಾರ್ಷ್‌ ಹಾಗೂ ಆಯುಷ್‌ ಬಡೋನಿ ಬ್ಯಾಟಿಂಗ್‌ ವಿಭಾಗದಲ್ಲಿದ್ದಾರೆ. ಆವೇಶ್‌ ಖಾನ್‌, ಆಕಾಶ್‌ ದೀಪ್‌ , ರವಿ ಬಿಷ್ನೋಯಿ ಮತ್ತು ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ ವಿಭಾಗದ ಹೊಣೆ ಹೊತ್ತುಕೊಂಡಿದ್ದಾರೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ

ಸ್ಥಳ: ಡಾ.ವೈ.ಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಸ್ಟೇಡಿಯಂ, ವಿಶಾಖಪಟ್ಟಣಂ

ನೇರ ಪ್ರಸಾರ: ಜಿಯೋಹಾಟ್‌ಸ್ಟಾರ್

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago